ಕೊಲಂಬೊ: ಶ್ರೀಲಂಕಾದ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ ಮತ್ತು ಮಾಜಿ ಹಣಕಾಸು ಸಚಿವ ಬಸಿಲ್ ರಾಜಪಕ್ಸೆ ಜುಲೈ 28 ರವರೆಗೆ ಅನುಮತಿಯಿಲ್ಲದೆ ದೇಶವನ್ನು ತೊರೆಯದಂತೆ ಶ್ರೀಲಂಕಾದ ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ಬಂಧಿಸಿದೆ ಎಂದು ಅಲ್ಲಿನ ಭ್ರಷ್ಟಾಚಾರ ವಿರೋಧಿ ಗುಂಪಾದ ಟ್ರಾನ್ಸ್ಫರೆನ್ಸಿ ಇಂಟರ್ನ್ಯಾಷನಲ್ ಶ್ರೀಲಂಕಾ ಹೇಳಿದೆ.
ಇಬ್ಬರು ಮಾಜಿ ಕೇಂದ್ರ ಬ್ಯಾಂಕ್ ಗವರ್ನರ್ಗಳು ಸೇರಿದಂತೆ ಇತರ ಮೂವರು ಮಾಜಿ ಅಧಿಕಾರಿಗಳು ಜುಲೈ 28 ರವರೆಗೆ ನ್ಯಾಯಾಲಯದ ಅನುಮತಿಯಿಲ್ಲದೆ ದೇಶದ ಹೊರಗೆ ಪ್ರಯಾಣಿಸುವಂತಿಲ್ಲ ಎಂದು ಟ್ರಾನ್ಸ್ಫರೆನ್ಸಿ ಇಂಟರ್ ನ್ಯಾಷನಲ್ ಶ್ರೀಲಂಕಾ ಟ್ವೀಟ್ ಮೂಲಕ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.