ADVERTISEMENT

ಶ್ರೀಲಂಕಾ ನೌಕಾಪಡೆಯಿಂದ 6 ಭಾರತೀಯ ಮೀನುಗಾರರ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಜುಲೈ 2022, 4:14 IST
Last Updated 21 ಜುಲೈ 2022, 4:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಮೇಶ್ವರ: ತಮ್ಮ ಜಲಗಡಿಯನ್ನು ಉಲ್ಲಂಘಿಸಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ತಮಿಳುನಾಡಿನ 6 ಮೀನುಗಾರರನ್ನು ಶ್ರೀಲಂಕಾದ ನೌಕಾಪಡೆ ಬಂಧಿಸಿದೆ.

ಪಾಲ್ಕ್ ಬೇ ಪ್ರದೇಶದಲ್ಲಿ ಮೀನುಗಾರಿಕೆಗೆ ಬಳಸಿದ ಎರಡು ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಶ್ರೀಲಂಕಾಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಕ್ರಮ ಜರುಗಿಸಲು ಬಂಧಿತರನ್ನು ತಲೈಮನ್ನಾರ್‌ ಪೊಲೀಸ್‌ ವಶಕ್ಕೆ ನೀಡಲಾಗಿದೆ ಎಂದು ನೌಕಾಪಡೆಯ ವಕ್ತಾರರು ಹೇಳಿದ್ದಾರೆ.

ADVERTISEMENT

ಕಳೆದ ಕೆಲವು ತಿಂಗಳಲ್ಲಿಭಾರತೀಯ ಮೀನುಗಾರರನ್ನು ಬಂಧಿಸಿದ್ದ ಹಲವು ಪ್ರಕರಣಗಳು ನಡೆದಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.