ADVERTISEMENT

ಶ್ರೀಲಂಕಾ ಸಂಸತ್ ಅಧಿವೇಶನ ಮೊಟಕು

ತೈಲ ಬಿಕ್ಕಟ್ಟು ಹಿನ್ನೆಲೆ

ಪಿಟಿಐ
Published 21 ಜೂನ್ 2022, 13:32 IST
Last Updated 21 ಜೂನ್ 2022, 13:32 IST
ಸಾಂದರ್ಭಿಕ ಚಿತ್ರ 
ಸಾಂದರ್ಭಿಕ ಚಿತ್ರ    

ಕೊಲಂಬೊ: ಶ್ರೀಲಂಕಾದಲ್ಲಿ ತೀವ್ರ ತೈಲ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಈ ವಾರ ನಾಲ್ಕು ದಿನ ನಡೆಯಬೇಕಿದ್ದ ಸಂಸತ್‌ ಅಧಿವೇಶನವನ್ನು ಎರಡೇ ದಿನಕ್ಕೆ ಮೊಟಕುಗೊಳಿಸಲು ನಿರ್ಧರಿಸಲಾಗಿದೆ ಎಂದು ಸಭಾನಾಯಕ ದಿನೇಶ್ ಗುಣವರ್ದೆನ ಅವರು ಮಂಗಳವಾರ ಹೇಳಿದ್ದಾರೆ.

‘ಸದ್ಯದ ತೈಲ ಪೂರೈಕೆ ಬಿಕ್ಕಟ್ಟನ್ನು ಗಮನದಲ್ಲಿಟ್ಟುಕೊಂಡು ಮಂಗಳವಾರ ಮತ್ತು ಬುಧವಾರ ಮಾತ್ರ ಅಧಿವೇಶನ ನಡೆಸಲು ನಿರ್ಧರಿಸಿದ್ದೇವೆ’ ಎಂದು ತಿಳಿಸಿದ್ದಾರೆ.

ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವ ಶ್ರೀಲಂಕಾದಲ್ಲಿ ಪೆಟ್ರೋಲ್‌, ಡೀಸೆಲ್, ಅಡುಗೆ ಇಂಧನ, ಆಹಾರ ವಸ್ತುಗಳ ಭಾರಿ ಅಭಾವ ಸೃಷ್ಟಿಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.