ADVERTISEMENT

ಶ್ರೀಲಂಕಾ: ಹಿಂಸಾಚಾರ ಪ್ರಕರಣ– ಶಂಕಿತ ಪಟ್ಟಿಯಲ್ಲಿ ಮಾಜಿ ಸಚಿವ

ಪಿಟಿಐ
Published 1 ಜೂನ್ 2022, 19:43 IST
Last Updated 1 ಜೂನ್ 2022, 19:43 IST

ಕೊಲಂಬೊ: ಕಳೆದ ತಿಂಗಳು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾರಣಾಂತಿಕ ದಾಳಿ ನಡೆಸಲಾದ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಪ್ರಧಾನಿ ಮಹಿಂದ ರಾಜಪಕ್ಸ ಅವರ ಪ್ರಮುಖ ಮಿತ್ರ ಪಕ್ಷದ ಮಾಜಿ ಸಚಿವರೊಬ್ಬರು ಶಂಕಿತ ಎಂದು ಹೆಸರಿಸಲಾಗಿದೆ. ಹಿಂಸಾಚಾರದ ತನಿಖೆ ನಡೆಸಲು ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ತನಿಖಾ ಆಯೋಗವನ್ನು ನೇಮಿಸಿದ್ದಾರೆ.

ಪ್ರತಿಭಟನಕಾರರ ಮೇಲೆ ದಾಳಿ ನಡೆಯುವ ಮೊದಲು ಮಹಿಂದ ರಾಜಪಕ್ಸ ಬೆಂಬಲಿಗರನ್ನು ಉದ್ದೇಶಿಸಿ ಪ್ರಚೋದನಕಾರಿ ಭಾಷಣ ಮಾಡಿದ ಮಾಜಿ ಸಚಿವ ಜಾನ್ಸ್‌ಟನ್ ಫರ್ನಾಂಡೋ ಅವರನ್ನು ಶಂಕಿತ ಎಂದು ಹೆಸರಿಸಲಾಗಿದೆ.

ಶ್ರೀಲಂಕಾ: ಸಂವಿಧಾನ ತಿದ್ದುಪಡಿಗೆ ವಿರೋಧ

ADVERTISEMENT

ಕೊಲಂಬೊ (ಪಿಟಿಐ): ಅಧ್ಯಕ್ಷರ ಅಧಿಕಾರವನ್ನು ಮೊಟುಕುಗೊಳಿಸಿ, ಆಡಳಿತದಲ್ಲಿ ಸಂಸತ್ತಿನ ಪಾತ್ರವನ್ನು ಹೆಚ್ಚಿಸಲು ಅನುವು ಮಾಡಿಕೊಡುವ ಸಂವಿಧಾನದ 21ನೇ ತಿದ್ದುಪಡಿಗೆ ಮೈತ್ರಿಕೂಟದ ಕೆಲ ಅಂಗಪಕ್ಷಗಳಿಂದಲೇ ವಿರೋಧ ವ್ಯಕ್ತವಾಗಿದೆ.

ದೇಶವನ್ನು ಆರ್ಥಿಕ ಬಿಕ್ಕಟ್ಟಿನಿಂದ ಪಾರು ಮಾಡಲು ನೆರವಾಗಲಿರುವ ಈ ತಿದ್ದುಪಡಿ ಮಸೂದೆಯನ್ನು ಸಂಸತ್‌ನಲ್ಲಿ ಮಂಡಿಸಬೇಕು ಎಂಬ ಪ್ರಧಾನಿ ರಾನಿಲ್‌ ವಿಕ್ರಮಸಿಂಘೆ ಅವರ ಪ್ರಯತ್ನಕ್ಕೆ ಆರಂಭದಲ್ಲಿಯೇ ಪ್ರತಿರೋಧ ವ್ಯಕ್ತವಾಗಿದೆ ಎಂದು ಮೂಲಗಳು ಬುಧವಾರ ಹೇಳಿವೆ.

ರಾಜಪಕ್ಸ ಕುಟುಂಬಗಳಿಗೆ ನಿಷ್ಠರಿಂದಲೇಉದ್ದೇಶಿತ ತಿದ್ದುಪಡಿಗೆ ಪ್ರತಿರೋಧ ವ್ಯಕ್ತವಾಗಿದೆ. ಅದರಲ್ಲೂ, ಮಾಜಿ ಹಣಕಾಸು ಸಚಿವ ಬಸಿಲ್ ರಾಜಪಕ್ಸ ಬೆಂಬಲಿಗರು ಈ ನಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.