ಕ್ವೆಟ್ಟಾ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಭಾನುವಾರ ಶಸ್ತ್ರಾಸ್ತ್ರಧಾರಿ ದುಷ್ಕರ್ಮಿಗಳು ಕಲ್ಲಿದ್ದಲು ಗಣಿಯ ಮೂವರು ಕಾರ್ಮಿಕರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಹರ್ನೈ ಜಿಲ್ಲೆಯ ಶರಗ್ ಪ್ರದೇಶದ ಕಲ್ಲಿದ್ದಲು ಗಣಿಯ ಬಳಿ ದುಷ್ಕರ್ಮಿಗಳು ಕಾರ್ಮಿಕರನ್ನು ಹತ್ಯೆಗೈದು ಪರಾರಿಯಾಗಿದ್ದಾರೆ. ಅವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಸರ್ಕಾರದ ವಕ್ತಾರರು ಹೇಳಿದ್ದಾರೆ.
ಯಾವುದೇ ಸಂಘಟನೆಗಳು ಹತ್ಯೆಯ ಹೊಣೆ ಹೊತ್ತುಕೊಂಡಿಲ್ಲ ಎಂದೂ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.