ADVERTISEMENT

ಕಾಶ್ಮೀರ ಸಮಸ್ಯೆಗೆ ಶಾಂತಿಯುತ ಪರಿಹಾರ: ಆಂಟೊನಿಯೊ ಗುಟೆರಸ್‌ ವಿಶ್ವಾಸ

ಪಿಟಿಐ
Published 22 ಜನವರಿ 2022, 12:49 IST
Last Updated 22 ಜನವರಿ 2022, 12:49 IST
ಆಟೊನಿಯೊ ಗುಟೆರಸ್‌
ಆಟೊನಿಯೊ ಗುಟೆರಸ್‌   

ವಿಶ್ವಸಂಸ್ಥೆ: ಭಾರತ ಮತ್ತು ಪಾಕಿಸ್ತಾನ ನಡುವಿನ ಕಾಶ್ಮೀರ ಸಮಸ್ಯೆಯನ್ನು ಶಾಂತಿಯುತವಾಗಿ ಬಗೆಹರಿಸಬಹುದು ಎಂದು ತಾವು ಭಾವಿಸುವುದಾಗಿ ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್‌ ಶುಕ್ರವಾರ ಹೇಳಿದ್ದಾರೆ.

ಇಲ್ಲಿ ನಡೆದ ಮಾಧ್ಯಮಗೋಷ್ಠಿಯೊಂದರಲ್ಲಿ ಪಾಕಿಸ್ತಾನದ ಪತ್ರಕರ್ತರೊಬ್ಬರು ಕಾಶ್ಮೀರ ವಿಷಯಕ್ಕೆ ಸಂಬಂಧಿಸಿ ಕೇಳಿದ ಪ್ರಶ್ನೆಗೆ ಗುಟೆರಸ್‌ ಈ ರೀತಿ ಪ್ರತಿಕ್ರಿಯಿಸಿದರು.

‘ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ನಾನು ಹಲವು ಬಾರಿ ಉತ್ತಮ ಸಲಹೆಗಳನ್ನು ನೀಡಿದ್ದೇನೆ. ಇದು ಶಾಂತಿಯುತವಾಗಿ ಪರಿಹರಿಸಬಹುದಾದ ವಿಷಯವಾಗಿದೆ. ಕಾಶ್ಮೀರ ಪರಿಸ್ಥಿತಿಯು ಬದಲಾಗಬೇಕಿದ್ದು, ಅಲ್ಲಿ ಮಾನವ ಹಕ್ಕುಗಳನ್ನು ಗೌರವಿಸಬೇಕು. ಜನರಿಗೆ ಶಾಂತಿ ಮತ್ತು ಭದ್ರತೆಯಿಂದ ಬದುಕುವ ಪರಿಸ್ಥಿತಿ ನಿರ್ಮಾಣವಾಗಬೇಕು ಎಂದು ನಾವು ಭಾವಿಸುತ್ತೇವೆ’ ಎಂದು ಅವರು ಹೇಳಿದರು.

ADVERTISEMENT

ಕಾಶ್ಮೀರ ವಿಚಾರದಲ್ಲಿ ಯಾವುದೇ ತೃತೀಯ ಪಕ್ಷದ ಮಧ್ಯಸ್ಥಿಕೆಯನ್ನು ಭಾರತ ಖಡಾಖಂಡಿತವಾಗಿ ವಿರೋಧಿಸುತ್ತಲೇ ಬಂದಿದ್ದು, ಈ ಸಮಸ್ಯೆಯನ್ನು ಉಭಯ ದೇಶಗಳು ಪರಸ್ಪರ ಚರ್ಚಿಸಿ ಬಗೆಹರಿಸಿಕೊಳ್ಳಬಹುದು, ಬೇರೆ ಯಾರ ನೆರವೂ ಅಗತ್ಯವಿಲ್ಲ ಎಂದು ದಶಕಗಳಿಂದ ಹೇಳುತ್ತ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.