ADVERTISEMENT

ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ: ವಿಶ್ವಸಂಸ್ಥೆ ಖಂಡನೆ

ಏಜೆನ್ಸೀಸ್
Published 28 ಡಿಸೆಂಬರ್ 2019, 20:00 IST
Last Updated 28 ಡಿಸೆಂಬರ್ 2019, 20:00 IST
   

ವಿಶ್ವಸಂಸ್ಥೆ: ಮ್ಯಾನ್ಮಾರ್‌ನಲ್ಲಿ ರೋಹಿಂಗ್ಯಾ ಮುಸ್ಲಿಮರು ಮತ್ತು ಇತರೆ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಮಾನವ ಹಕ್ಕುಗಳ ಉಲ್ಲಂಘನೆ ಖಂಡಿಸಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ನಿರ್ಣಯ ಮಂಡಿಸಿದೆ.

ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರಕ್ಕೆ ಕಡಿವಾಣ ಹಾಕಲು ಮ್ಯಾನ್ಮಾರ್‌ ಸರ್ಕಾರ ತಕ್ಷಣದಲ್ಲೇ ಕ್ರಮ ಕೈಗೊಳ್ಳಬೇಕು ಎಂದು ನಿರ್ಣಯದಲ್ಲಿ ಆಗ್ರಹಿಸಲಾಗಿದೆ. ಈ ನಿರ್ಣಯಕ್ಕೆ ಮ್ಯಾನ್ಮಾರ್‌ನ ವಿಶ್ವಸಂಸ್ಥೆ ರಾಯಭಾರಿ ಹೌ ಡು ಶುಆನ್‌ ವಿರೋಧ ವ್ಯಕ್ತಪಡಿಸಿದರು.

‘ನಿರ್ಣಯವು ಇಬ್ಬಂದಿ ನಿಲುವಿಗೆಉದಾಹರಣೆಯಾಗಿದ್ದು, ಮ್ಯಾನ್ಮಾರ್‌ ಮೇಲೆ ಉದ್ದೇಶಪೂರ್ವಕವಾಗಿ ರಾಜಕೀಯ ಒತ್ತಡ ತರುವ ಕ್ರಮವಾಗಿದೆ’ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.