ADVERTISEMENT

ಭಾರತಕ್ಕೆ ನೀಡುತ್ತಿರುವ ನೆರವು ಹೆಚ್ಚಳಕ್ಕೆ ಬದ್ಧ: ವಿಶ್ವಸಂಸ್ಥೆ

ಪಿಟಿಐ
Published 30 ಏಪ್ರಿಲ್ 2021, 6:35 IST
Last Updated 30 ಏಪ್ರಿಲ್ 2021, 6:35 IST
ಆ್ಯಂಟೊನಿಯೊ ಗುಟೆರಸ್‌
ಆ್ಯಂಟೊನಿಯೊ ಗುಟೆರಸ್‌   

ವಿಶ್ವಸಂಸ್ಥೆ: ಕೋವಿಡ್‌–19 ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ ನೀಡುತ್ತಿರುವ ನೆರವನ್ನು ಹೆಚ್ಚಿಸಲು ಸಂಸ್ಥೆ ಸಿದ್ಧವಾಗಿದೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್‌ ಹೇಳಿದ್ದಾರೆ.

‘ಭಾರತದಲ್ಲಿ 1.8 ಕೋಟಿಗೂ ಅಧಿಕ ಜನರು ಕೋವಿಡ್‌ನಿಂದ ಬಳಲುತ್ತಿದ್ದು, 2 ಲಕ್ಷಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಇಂಥ ಕಠಿಣ ಸಮಯದಲ್ಲಿ ವಿಶ್ವಸಂಸ್ಥೆಯು ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಭಾರತದೊಂದಿಗೆ ನಿಲ್ಲಲಿದೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಗುಟೆರಸ್‌ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ವಿಶ್ವಸಂಸ್ಥೆಯಲ್ಲಿನ ಭಾರತದ ಕಾಯಂ ಪ್ರತಿನಿಧಿ ಟಿ.ಎಸ್‌.ತಿರುಮೂರ್ತಿ, ‘ಭಾರತಕ್ಕೆ ನೆರವು ನೀಡುತ್ತಿರುವ ವಿಶ್ವಸಂಸ್ಥೆಗೆ ಅಭಿನಂದನೆಗಳು’ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.