ವಿಶ್ವಸಂಸ್ಥೆ: ಗ್ಲಾಸ್ಗೊದಲ್ಲಿ ನಡೆಯುತ್ತಿರುವ 76ನೇ ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದ ಹವಾಮಾನ ಬದಲಾವಣೆ ಸಮಿತಿಯ ಸಭೆಯಲ್ಲಿ ಅಂತರರಾಷ್ಟ್ರೀಯ ಸೌರಶಕ್ತಿ ಒಕ್ಕೂಟಕ್ಕೆ ವೀಕ್ಷಕ ಸ್ಥಾನಮಾನ ನೀಡುವ ಕುರಿತು ಭಾರತ ಮಂಡಿಸಿದ್ದ ಕರಡು ನಿರ್ಣಯವನ್ನು ವಿಶ್ವಸಂಸ್ಥೆಯ ಮಹಾ ಅಧಿವೇಶನ ಸಮಿತಿ ಅನುಮೋದಿಸಿದೆ.
ಹವಾಮಾನ ಬದಲಾವಣೆ ವಿಷಯದಲ್ಲಿ ಎದುರಾಗಬಹುದಾದ ಕಾನೂನಾತ್ಮಕ ಸಮಸ್ಯೆಗಳನ್ನು ಪರಿಹರಿಸುವ ಈ ಕರಡು ನಿರ್ಣಯವನ್ನು ಗುರುವಾರ ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದ ಆರನೇ ಸಮಿತಿಯ ಔಪಚಾರಿಕವಾಗಿ ಅನುಮೋದಿಸಿದೆ.
ವಿಶ್ವಸಂಸ್ಥೆಯಲ್ಲಿನ ಭಾರತದ ಉಪ ಕಾಯಂ ಪ್ರತಿನಿಧಿ ಆರ್. ರವೀಂದ್ರ, ‘ಮುಂದಿನ ವಾರ ಗ್ಲಾಸ್ಗೊದಲ್ಲಿ ನಡೆಯಲಿರುವ ‘ಸಿಒಪಿ–26‘ ಸಭೆಗೆ ಪೂರ್ವಭಾವಿಯಾಗಿ, ಅಂತರರಾಷ್ಟ್ರೀಯ ಸೌರ ಒಕ್ಕೂಟಕ್ಕೆ ವೀಕ್ಷಕರ ಸ್ಥಾನಮಾನ ನೀಡುವ ಕರಡು ನಿರ್ಣಯದ ಮೇಲೆ ಇಂದು ಕೈಗೊಂಡ ಕ್ರಮವು ಸಾಂಕೇತಿಕವಾಗಿರುವ ಜೊತೆಗೆ, ವಸ್ತುನಿಷ್ಠವಾಗಿದೆ‘ ಎಂದು ಟ್ವೀಟ್ ಮಾಡಿದ್ದಾರೆ.
‘ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ಕೈಗೊಳ್ಳುವ ಕ್ರಮಗಳ ಬಗ್ಗೆಯೂ ಭಾರತ ಚರ್ಚಿಸಲಿದೆ‘ ಎಂದು ಅವರು ಟ್ವೀಟ್ನಲ್ಲಿ ತಿಳಿಸಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.