ADVERTISEMENT

ಆಸಿಯಾನ್‌ ಶೃಂಗಸಭೆ: ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಭಾಗಿ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2022, 5:59 IST
Last Updated 13 ನವೆಂಬರ್ 2022, 5:59 IST
ಉಪರಾಷ್ಟ್ರಪತಿ ಜಗದೀಪ್‌ ಧನಕರ್‌
ಉಪರಾಷ್ಟ್ರಪತಿ ಜಗದೀಪ್‌ ಧನಕರ್‌   

ಪನೋಮ್‌ ಪೆನ್‌ (ಕಾಂಬೋಡಿಯಾ): ಇಲ್ಲಿ ನಡೆಯುತ್ತಿರುವಭಾರತ– ಆಸಿಯಾನ್‌ ರಾಷ್ಟ್ರಗಳ (ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ) ಶೃಂಗಸಭೆಯಲ್ಲಿಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಭಾಗವಹಿಸಿದ್ದಾರೆ.

ಈ ಸಭೆಯಲ್ಲಿ ವಿವಿಧ ದೇಶಗಳೊಂದಿಗೆ ದ್ವಿಪಕ್ಷೀಯ ಸಹಕಾರ, ಜಾಗತಿಕ ಆಹಾರ ಭದ್ರತೆ, ಭಯೋತ್ಪಾದನೆ ನಿಗ್ರಹ ಹಾಗೂ ವ್ಯಾಪಾರ ಸಂಬಂಧಗಳ ಕುರಿತು ಮಾತುಕತೆ ನಡೆಸಲಾಗುವುದು.

ಉಪರಾಷ್ಟ್ರಪತಿ ಜೊತೆಗೆ ಭಾರತದ ವಿದೇಶಾಂಗ ಸಚಿವ ಜೈಶಂಕರ್‌ ಹಾಗೂ ಉನ್ನತಮಟ್ಟದ ಅಧಿಕಾರಿಗಳ ನಿಯೋಗ ಈ ಶೃಂಗಸಭೆಯಲ್ಲಿ ಭಾಗವಹಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.