ಪನೋಮ್ ಪೆನ್ (ಕಾಂಬೋಡಿಯಾ): ಇಲ್ಲಿ ನಡೆಯುತ್ತಿರುವಭಾರತ– ಆಸಿಯಾನ್ ರಾಷ್ಟ್ರಗಳ (ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ) ಶೃಂಗಸಭೆಯಲ್ಲಿಉಪರಾಷ್ಟ್ರಪತಿ ಜಗದೀಪ್ ಧನಕರ್ ಭಾಗವಹಿಸಿದ್ದಾರೆ.
ಈ ಸಭೆಯಲ್ಲಿ ವಿವಿಧ ದೇಶಗಳೊಂದಿಗೆ ದ್ವಿಪಕ್ಷೀಯ ಸಹಕಾರ, ಜಾಗತಿಕ ಆಹಾರ ಭದ್ರತೆ, ಭಯೋತ್ಪಾದನೆ ನಿಗ್ರಹ ಹಾಗೂ ವ್ಯಾಪಾರ ಸಂಬಂಧಗಳ ಕುರಿತು ಮಾತುಕತೆ ನಡೆಸಲಾಗುವುದು.
ಉಪರಾಷ್ಟ್ರಪತಿ ಜೊತೆಗೆ ಭಾರತದ ವಿದೇಶಾಂಗ ಸಚಿವ ಜೈಶಂಕರ್ ಹಾಗೂ ಉನ್ನತಮಟ್ಟದ ಅಧಿಕಾರಿಗಳ ನಿಯೋಗ ಈ ಶೃಂಗಸಭೆಯಲ್ಲಿ ಭಾಗವಹಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.