ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಗ್ರಾಮವೊಂದರ ಪ್ರೌಢಶಾಲಾ ವಿದ್ಯಾರ್ಥಿಗಳ ಪುಂಡಾಟಿಕೆಯನ್ನು ಆಧಾರವಾಗಿಟ್ಟುಕೊಂಡು ಎರಡು ಲೇಖನಗಳನ್ನು ಬರೆಯಲಾಗಿದೆ (ಸಂಗತ, ಡಿ. 24 ಮತ್ತು 25). ವಿದ್ಯಾರ್ಥಿಗಳ ಇಂತಹ ವರ್ತನೆಗೆ ಹಲವು ಕಾರಣಗಳಿವೆ. ಅವುಗಳಲ್ಲಿ ಒಂದು, ವಿದ್ಯಾರ್ಥಿಗಳು ತಮ್ಮ ಬಗ್ಗೆ ಭಯ-ಭಕ್ತಿಯಿಂದ ಇರಬೇಕು ಎಂದು ಶಿಕ್ಷಕರು ಬಯಸುವುದು. ಆದರೆ ಶಿಕ್ಷಕರ ಬಗ್ಗೆ ವಿದ್ಯಾರ್ಥಿಗಳಲ್ಲಿ ಭಯ ಇರಬಾರದು, ಗೌರವ ಇರಬೇಕು. ಇದು ತೋರಿಕೆಯ ಗೌರವವಾಗಬಾರದು. ಈ ರೀತಿಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ಪ್ರಭಾವಿಸಬೇಕು. ಆದರೆ ನಡೆ-ನುಡಿ ಒಂದಾಗಿಲ್ಲದ ಶಿಕ್ಷಕ ಎಷ್ಟೇ ನೀತಿ, ಮೌಲ್ಯಗಳನ್ನು ಹೇಳಿದರೂ ವಿದ್ಯಾರ್ಥಿಗಳು ಅದನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ.
ಯಾವುದು ಸರಿ ಯಾವುದು ತಪ್ಪು ಎಂದು ವಿವೇಚಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳು ಹೊಂದಿರುವುದಿಲ್ಲ. ಸಾಮಾಜಿಕ ಜಾಲತಾಣಗಳು ಅವರ ಮೇಲೆ ಪ್ರಭಾವ ಬೀರುತ್ತಿವೆ. ಇಂತಹವುಗಳಿಂದ ವಿದ್ಯಾರ್ಥಿಗಳನ್ನು ದೂರ ಇರಿಸುವುದು ಪೋಷಕರು ಹಾಗೂ ಶಿಕ್ಷಕರಿಗೆ ಸವಾಲಿನ ವಿಷಯವಾಗಿದೆ.
ಶಿವಕುಮಾರ್ ಎಸ್.,ಊರುಕೆರೆ, ತುಮಕೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.