ADVERTISEMENT

ಶರಾವತಿ ಬಗ್ಗೆ ನ್ಯಾಯಾಂಗ ವಿಚಾರಣೆ ಇಲ್ಲ

ಭಾನುವಾರ, 15–12–1963

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2013, 19:30 IST
Last Updated 14 ಡಿಸೆಂಬರ್ 2013, 19:30 IST

ಬೆಂಗಳೂರು, ಡಿ. 14 – ಶರಾವತಿ ಯೋಜನೆ ಕಾರ್ಯಗಳಿಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನೊಳಗೊಂಡ ಒಂದು ಶ್ವೇತಪತ್ರವನ್ನು ಪ್ರಕಟಿಸಲು ಸರ್ಕಾರ ನಿರ್ಧರಿಸಿದೆಯೆಂದು ಮುಖ್ಯಮಂತ್ರಿ ಶ್ರೀ ಎಸ್‌. ನಿಜಲಿಂಗಪ್ಪನವರು ಇಂದು ವಿಧಾನ ಸಭೆಯಲ್ಲಿ ತಿಳಿಸಿದರು.

ಪ್ರಶ್ನೋತ್ತರ ಕಾಲದ ನಂತರ ವಿರೋಧ ಪಕ್ಷದ ನಾಯಕ ಎಸ್‌. ಶಿವಪ್ಪ ಹಾಗೂ ಎಸ್‌. ಎಂ. ಕೃಷ್ಣ ಅವರು ಎತ್ತಿದ ‘ಶರಾವತಿ ಹಗರಣ’ ವಿಚಾರದಲ್ಲಿ ವಿವರಣೆ ನೀಡಿದ ಮುಖ್ಯಮಂತ್ರಿಯವರು ‘ಈ ಬಗ್ಗೆ ನ್ಯಾಯಾಂಗ ವಿಚಾರಣೆ ನಡೆಸಬೇಕಾದ ಅಗತ್ಯ ಏನೇನೂ ಇಲ್ಲವೆಂಬುದು ನನಗೆ ಸ್ಪಷ್ಟವಾಗಿದೆ’ ಎಂದರು.

‘ಶರಾವತಿಯ ಬಗ್ಗೆ ಈ ಸಭೆಯಲ್ಲಿ ಮತ್ತು ಹೊರಗೆ ಕೇಳಿಬಂದಿರುವ ಆರೋಪಗಳು ಕೇವಲ ಊಹಾಪೋಹಗಳು, ಇವುಗಳಲ್ಲೇನೂ ಸತ್ಯಾಂಶವಿಲ್ಲ’ ಎಂದೂ ಶ್ರೀ ನಿಜಲಿಂಗಪ್ಪನವರು ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.