ADVERTISEMENT

25 ವರ್ಷಗಳ ಹಿಂದೆ: 1-11-1995

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2020, 19:31 IST
Last Updated 31 ಅಕ್ಟೋಬರ್ 2020, 19:31 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಕಾವೇರಿ ನಾಲ್ಕನೇ ಹಂತ ಜನವರಿಯಲ್ಲಿ ಆರಂಭ

ಬೆಂಗಳೂರು, ಅ.31– ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಸುಮಾರು 1,275 ಕೋಟಿ ರೂಪಾಯಿ ಅಂದಾಜು ವೆಚ್ಚದ ಕಾವೇರಿ ಯೋಜನೆ ನಾಲ್ಕನೇ ಹಂತದ ಕೆಲಸ ಜನವರಿಯಲ್ಲಿ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ದೇವೇಗೌಡ ಇಂದು ಇಲ್ಲಿ ಪ್ರಕಟಿಸಿದರು.

‘ಇದರಿಂದ ಇನ್ನು 50 ವರ್ಷವಾದರೂ ನಗರಕ್ಕೆ ನೀರಿನ ಸಮಸ್ಯೆ ಬರದಂತೆ ನೋಡಿಕೊಳ್ಳಬಹುದು’ ಎಂದ ಅವರು, ‘ಈ ಯೋಜನೆಗೆ ಬೇಕಾದ ಭಾರಿ ಮೊತ್ತವನ್ನು ಹೊಂದಿಸುವ ಬಗೆ ನಮಗೆ ಗೊತ್ತು. ಹೊಂದಿಸುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಆದರೆ, ಹಣ ಸಂಗ್ರಹ ಹೇಗೆ ಎಂಬುದನ್ನು ಅವರು ಬಹಿರಂಗಪಡಿಸಲಿಲ್ಲ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.