ADVERTISEMENT

25 ವರ್ಷಗಳ ಹಿಂದೆ: ಶುಕ್ರವಾರ, 6.9.1996

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2021, 19:30 IST
Last Updated 5 ಸೆಪ್ಟೆಂಬರ್ 2021, 19:30 IST
   

25 ವರ್ಷಗಳ ಹಿಂದೆ ಶುಕ್ರವಾರ 6.9.1996
ಬೆಂಬಲ ವಾಪಸ್ ಭಯವಿಲ್ಲ: ಪ್ರಧಾನಿ ಪಟ್ಟದ ಅವಧಿ ಚಿಂತೆ ಇಲ್ಲ

ನವದೆಹಲಿ, ಸೆ. 5 (ಪಿಟಿಐ, ಯುಎನ್‌ಐ)– ಕೇಂದ್ರದ ಸಂಯುಕ್ತರಂಗ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಕಾಂಗ್ರೆಸ್ ವಾಪಸು ಪಡೆಯುವ ಸಾಧ್ಯತೆ ಇಲ್ಲ ಎಂಬ ಆಶಾಭಾವನೆಯನ್ನು ವ್ಯಕ್ತಪಡಿಸಿರುವ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ‘ಪ್ರಧಾನಿ ಸ್ಥಾನದಲ್ಲಿ ಎಷ್ಟು ದಿನ ಮುಂದುವರಿಯುತ್ತೇನೆ ಎನ್ನುವುದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ’ ಎಂದು ಹೇಳಿದ್ದಾರೆ.

ಉತ್ತರಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್–ಬಿಎಸ್‌ಪಿ ಮೈತ್ರಿ ಕೂಟಕ್ಕೆ ಬಹುಮತ ಬಂದರೆ ಕಾಂಗ್ರೆಸ್ ಕೇಂದ್ರ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸು ಪಡೆಯುತ್ತದೆ ಎಂಬ ವದಂತಿಯ ಹಿನ್ನೆಲೆಯಲ್ಲಿ ಪ್ರಧಾನಿ ಅವರ ಈ ಹೇಳಿಕೆ ಮಹತ್ವದ್ದಾಗಿದೆ. ಕೇಂದ್ರದ ಸಂಯುಕ್ತರಂಗ ಸರ್ಕಾರ ಭಾನುವಾರಕ್ಕೆ ನೂರು ದಿನಗಳ ಪೂರೈಸಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.