ಉತ್ತರಪ್ರದೇಶ: ಅತಂತ್ರ ಸ್ಥಿತಿ
ನವದೆಹಲಿ, ಅ. 16 (ಯುಎನ್ಐ)– ಉತ್ತರಪ್ರದೇಶದಲ್ಲಿ ಬಿಜೆಪಿಯು ಸರ್ಕಾರ ರಚನೆ ಮಾಡಲು ತಮ್ಮ ಪಕ್ಷ ಬೆಂಬಲ ನೀಡುವುದಿಲ್ಲ ಎಂದು ಬಿಎಸ್ಪಿಯ ಪ್ರಧಾನ ಕಾರ್ಯದರ್ಶಿ ಮಾಯಾವತಿ ಅವರು ರಾಜ್ಯಪಾಲರಿಗೆ ತಿಳಿಸಿರುವುದರಿಂದ ಉತ್ತೇಜಿತರಾಗಿರುವ ಪ್ರಧಾನಿ ಹಾಗೂ ಸಂಯುಕ್ತ ರಂಗದ ನಾಯಕ ಎಚ್.ಡಿ. ದೇವೇಗೌಡರು ಆ ರಾಜ್ಯದಲ್ಲಿ ಜನಪ್ರಿಯ ಸರ್ಕಾರ ರಚನೆಗೆ ಕೊನೆ ಗಳಿಗೆ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.
ಬಿಜೆಪಿಗೆ ಬೆಂಬಲ ನೀಡುವುದಿಲ್ಲ ಎಂದು ಬಿಎಸ್ಪಿ ಹೇಳುವ ಮೂಲಕ ಸಂಯುಕ್ತ ರಂಗದ ಷರತ್ತನ್ನು ಈಡೇರಿಸಿರುವುದರಿಂದ ರಂಗ ಈಗ ತೀವ್ರ ಚಟುವಟಿಕೆಯಲ್ಲಿ ತೊಡಗಿದೆ.
ಈ ನಡುವೆ ರಾಜ್ಯಪಾಲರನ್ನು ಭೇಟಿಯಾದ ಬಿಜೆಪಿ ನಾಯಕರು ಸರ್ಕಾರ ಸಲ್ಲಿಸಲು ಆಹ್ವಾನಿಸುವಂತೆ ಮನವಿ ಸಲ್ಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.