ADVERTISEMENT

25 ವರ್ಷಗಳ ಹಿಂದೆ| ಶನಿವಾರ, 20–5–1995

​ಪ್ರಜಾವಾಣಿ ವಾರ್ತೆ
Published 19 ಮೇ 2020, 21:34 IST
Last Updated 19 ಮೇ 2020, 21:34 IST

ಪೊಲೀಸ್‌ ವ್ಯವಸ್ಥೆ ಪುನರ್‌ರಚನೆಗೆ ಏಕಸದಸ್ಯ ಆಯೋಗ ರಚನೆ

ಬೆಂಗಳೂರು, ಮೇ 19– ರಾಜ್ಯದ ಪೊಲೀಸ್‌ ವ್ಯವಸ್ಥೆಯನ್ನು ಇಡಿಯಾಗಿ ಪುನರ್‌ರಚಿಸಲು ಸರ್ಕಾರ ಉದ್ದೇಶಿಸಿದ್ದು ಇದಕ್ಕೆ ಅಗತ್ಯವಿರುವ ಸಲಹೆ– ಸೂಚನೆ ನೀಡಲೆಂದು ಏಕಸದಸ್ಯ ಆಯೋಗವನ್ನು ರಚಿಸಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ವಾರ್ತಾ ಮತ್ತು ಕಾನೂನು ಸಚಿವ ಎಂ.ಸಿ.ನಾಣಯ್ಯ ಇಂದು ಇಲ್ಲಿ ತಿಳಿಸಿದರು.

ಪೊಲೀಸ್‌ ಇಲಾಖೆಯ ವಿವಿಧ ಹಂತಗಳಲ್ಲಿ, ವಿವಿಧ ವಿಭಾಗಗಳಲ್ಲಿ ಸಮನ್ವಯತೆಯದೇ ದೊಡ್ಡ ಸಮಸ್ಯೆಯಾಗಿದೆ. ಇದಕ್ಕೆ ಪರಿಹಾರೋಪಾಯ ಸೂಚಿಸುವುದೂ ಈ ಆಯೋಗದ ಕಾರ್ಯ ಷರತ್ತುಗಳಲ್ಲಿ ಒಂದಾಗಿದೆ ಎಂದು ಅವರು ಸುದ್ದಿಗಾರರಿಗೆ ವಿವರಿಸಿದರು.

ADVERTISEMENT

ಕಾಂಗೈ ಎರಡು ಹೋಳುತಿವಾರಿಗೆ ಅಧ್ಯಕ್ಷ ಪಟ್ಟ

ನವದೆಹಲಿ, ಮೇ 19 (ಯುಎನ್‌ಐ, ಪಿಟಿಐ)– ಭಿನ್ನಮತೀಯರ ರ‍್ಯಾಲಿ ಇಂದು ಎನ್‌.ಡಿ.ತಿವಾರಿ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವುದರೊಂದಿಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷ ಎರಡು ಹೋಳಾಯಿತು.

ಪ್ರಧಾನಿ ಪಿ.ವಿ.ನರಸಿಂಹರಾವ್‌ ನೇತೃತ್ವದ ಕಾಂಗೈ ನಾಯಕತ್ವ ‘ಎಲ್ಲ ರಂಗಗಳಲ್ಲೂ ಸಂಪೂರ್ಣ ವಿಫಲ’ ಎಂದು ಆರೋಪಿಸಿರುವ ಪಕ್ಷದ ಭಿನ್ನಮತೀಯರು, ಅವರ ವಿರುದ್ಧ ಬಹಿರಂಗ ಸಮರವನ್ನೇ ಸಾರಿದ್ದು, ತಾವೇ ನಿಜವಾದ ಕಾಂಗ್ರೆಸ್ಸಿಗರು ಎಂದು ಘೋಷಿಸಿಕೊಂಡಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.