ADVERTISEMENT

25 ವರ್ಷಗಳ ಹಿಂದೆ: ಬುಧವಾರ 27–12–1995

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2020, 18:21 IST
Last Updated 26 ಡಿಸೆಂಬರ್ 2020, 18:21 IST
   

ಪುನರ್ ವಿಮರ್ಶಿತ ಐಆರ್‌ಡಿಪಿ ಯೋಜನೆ ಜನವರಿಗೆ ಜಾರಿ
ನವದೆಹಲಿ, ಡಿ. 26 (ಯುಎನ್ಐ)–ಗ್ರಾಮೀಣ ಅಭಿವೃದ್ಧಿಗೆ ಇನ್ನಷ್ಟು ಚಾಲನೆ ನೀಡಲು ಮತ್ತು ಗ್ರಾಮಾಂತರ ಪ್ರದೇಶದ ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸುವ ಪುನರ್ ವಿಮರ್ಶಿತ ಸಮಗ್ರ ಗ್ರಾಮೀಣಾಭಿವೃದ್ಧಿ ಯೋಜನೆ (ಐಆರ್‌ಡಿಪಿ)ಯನ್ನು ಕೇಂದ್ರ ಸರ್ಕಾರ ಇಂದು ಪ್ರಕಟಿಸಿದೆ.

ಈ ಯೋಜನೆ ಎಂಟನೇ ತರಗತಿಯವರೆಗೆ ಓದಿರುವ ಗ್ರಾಮೀಣ ಪ್ರದೇಶದ ಯುವಕರಿಗೆ ನೆರವಾಗಲಿದ್ದು, ಯೋಜನೆ ಜ.1ರಿಂದ ಜಾರಿಗೆ ಬರಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಜಗನ್ನಾಥ ಮಿಶ್ರಾ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT