ADVERTISEMENT

25 ವರ್ಷಗಳ ಹಿಂದೆ: ಮಂಗಳವಾರ, ಶುಕ್ರವಾರ, 26-09-1997

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2022, 20:44 IST
Last Updated 25 ಸೆಪ್ಟೆಂಬರ್ 2022, 20:44 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜೆಎಂಎಂ ಲಂಚ ಪ್ರಕರಣ: ವಿಶೇಷ ಕೋರ್ಟಿನಲ್ಲಿ ನ. 4ರಿಂದ ವಿಚಾರಣೆ

ನವದೆಹಲಿ, ಸೆ. 25 (ಯುಎನ್‌ಐ, ಪಿಟಿಐ)– ಜೆಎಂಎಂ ಲಂಚ ಪ್ರಕರಣದಲ್ಲಿ ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್‌ ಹಾಗೂ ಇತರ 19 ಮಂದಿಯ ವಿರುದ್ಧ ನಿಯೋಜಿತ ಸಿಬಿಐ ನ್ಯಾಯಾಲಯ ಇಂದು ದೋಷಾರೋಪ ನಿಗದಿಪಡಿಸಿತು.

ಪ್ರಧಾನಿಯಾಗಿದ್ದವರು ಭ್ರಷ್ಟಾಚಾರದ ಆರೋಪಕ್ಕೆ ಗುರಿಯಾಗಿ, ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿರುವುದು ಇದೇ ಮೊದಲು. ಅವರು ವಿಚಾರಣೆ ಎದುರಿಸುತ್ತಿರುವ ಎರಡನೇ ಕ್ರಿಮಿನಲ್‌ ಪ್ರಕರಣ ಇದಾಗಿದ್ದು, ಲಕ್ಕೂಭಾಯಿ ಪಾಠಕ್‌ ವಂಚನೆ ಪ್ರಕರಣದಲ್ಲೂ ನರಸಿಂಹರಾವ್ ವಿಚಾರಣೆ ಎದುರಿಸುತ್ತಿದ್ದಾರೆ.

ADVERTISEMENT

ಸರ್ಕಾರಿ ಗೌರವದೊಂದಿಗೆ ಇಂದು ವೆಂಕಟರಾಮಯ್ಯ ಅಂತ್ಯಕ್ರಿಯೆ

ಬೆಂಗಳೂರು, ಸೆ. 25– ನಿನ್ನೆ ಮಧ್ಯರಾತ್ರಿ ನಿಧನರಾದ ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಇ.ಎಸ್‌.ವೆಂಕಟರಾಮಯ್ಯ ಅವರ ಅಂತಿಮ ಸಂಸ್ಕಾರವು ನಾಳೆ ರಾಜ್ಯ ಸರ್ಕಾರಿ ಗೌರವದೊಂದಿಗೆ ಅವರ ಹುಟ್ಟೂರಾದ ತಣ್ಣೂರಿನಲ್ಲಿ
ನಡೆಯಲಿದೆ.

ವೆಂಕಟರಾಮಯ್ಯ ಅವರ ಮನೆಗೆ ತೆರಳಿ ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛವಿರಿಸಿ ಅಂತಿಮ ಗೌರವ ಸಲ್ಲಿಸಿದ ಮುಖ್ಯಮಂತ್ರಿ ಜೆ.ಎಚ್‌.ಪಟೇಲ್‌ ಈ ವಿಷಯ ತಿಳಿಸಿದರು. ದಿವಂಗತರ ಗೌರವಾರ್ಥ ರಾಜ್ಯ ಸರ್ಕಾರ ಇಂದು ಶೋಕಾಚರಣೆ ಘೋಷಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.