ADVERTISEMENT

25 ವರ್ಷಗಳ ಹಿಂದೆ | ಬುಧವಾರ, 21–1–1998

​ಪ್ರಜಾವಾಣಿ ವಾರ್ತೆ
Published 20 ಜನವರಿ 2023, 21:53 IST
Last Updated 20 ಜನವರಿ 2023, 21:53 IST
   

ಮೂವರು ಸಚಿವರ ರಾಜೀನಾಮೆ ಬಿಕ್ಕಟ್ಟಿನಲ್ಲಿ ಪಟೇಲ್‌ ಸರ್ಕಾರ
ಬೆಂಗಳೂರು, ಜ. 20–
ಮುಖ್ಯಮಂತ್ರಿ ಜೆ.ಎಚ್‌.ಪಟೇಲ್ ಸಂಪುಟದ ಮೂವರು ಸಚಿವರು ಇಂದು ರಾಜೀನಾಮೆ ನೀಡಿ, ಮಾಜಿ ಮುಖ್ಯಮಂತ್ರಿ ಹಾಗೂ ಲೋಕಶಕ್ತಿ ಮುಖಂಡ ರಾಮಕೃಷ್ಣ ಹೆಗಡೆ ನೇತೃತ್ವದ ರಾಷ್ಟ್ರೀಯ ನವ ನಿರ್ಮಾಣ ವೇದಿಕೆ ಸೇರಿರುವುದರಿಂದ ಮೂರು ವರ್ಷದ ಜನತಾದಳ ಸರ್ಕಾರ ತೀವ್ರ ಬಿಕ್ಕಟ್ಟಿಗೆ ಸಿಲುಕಿದೆ.

ಕೈಗಾರಿಕಾ ಸಚಿವ ಆರ್‌.ವಿ.ದೇಶಪಾಂಡೆ, ಕಂದಾಯ ಸಚಿವ ರಮೇಶ್‌ ಜಿಗಜಿಣಗಿ ಹಾಗೂ ಕ್ರೀಡಾ ಸಚಿವ ಅಜಯ್‌ ಕುಮಾರ್‌ ಸರ್‌ನಾಯಕ್‌ ಅವರು ಬೆಳಿಗ್ಗೆ ಮುಖ್ಯಮಂತ್ರಿ ಜೆ.ಎಚ್‌.ಪಟೇಲ್‌ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT