ADVERTISEMENT

25 ವರ್ಷಗಳ ಹಿಂದೆ ಶುಕ್ರವಾರ 19.4.1996

25 ವರ್ಷಗಳ ಹಿಂದೆ ಶುಕ್ರವಾರ 19.4.1996

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2021, 19:30 IST
Last Updated 18 ಏಪ್ರಿಲ್ 2021, 19:30 IST
   

ಕೌಲ್ ರಾಜೀನಾಮೆಗೆ ಹೆಚ್ಚುತ್ತಿರುವ ಒತ್ತಡ

ನವದೆಹಲಿ, ಏ. 18 (ಪಿಟಿಐ)– ವಸತಿ ಹಗರಣದಲ್ಲಿ ತಮ್ಮ ಪಾತ್ರದ ಬಗ್ಗೆ ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿರುವ ಅಭಿಪ್ರಾಯದ ಹಿನ್ನೆಲೆಯಲ್ಲಿ ಅಧಿಕಾರ ತ್ಯಾಗ ಮಾಡಲು ಹಿಮಾಚಲ ಪ್ರದೇಶದ ರಾಜ್ಯಪಾಲೆ ಶೀಲಾ ಕೌಲ್ ಅವರು ತೀವ್ರ ಒತ್ತಡಕ್ಕೆ ಒಳಗಾಗಿದ್ದಾರೆ.

ರಾಷ್ಟ್ರಪತಿ ಡಾ. ಶಂಕರ್ ದಯಾಳ್ ಶರ್ಮಾ ಅವರು ಈ ಸಂಬಂಧ ಕ್ರಮ ತೆಗೆದುಕೊಳ್ಳಲು ಪ್ರಧಾನಿ ಪಿ.ವಿ.ನರಸಿಂಹ ರಾವ್ ಅವರಿಗೆ ಸೂಚಿಸಿದ್ದಾರೆ. ಹೀಗಾಗಿ, ಯಾವುದೇ ಕ್ಷಣದಲ್ಲಿ ಶೀಲಾ ಕೌಲ್ ಅವರು ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಬಹುದು ಎಂಬ ಗುಲ್ಲು ಶಿಮ್ಲಾ ಮತ್ತು ದೆಹಲಿಯಲ್ಲಿ ಇಂದು ಹರಡಿತ್ತು.

ADVERTISEMENT

ಚುನಾವಣಾ ಫಲಿತಾಂಶ ಶೀಘ್ರ ಪ್ರಕಟಣೆಗೆ ಆಯೋಗದ ಕ್ರಮ

ನವದೆಹಲಿ, ಏ. 18 (ಪಿಟಿಐ)– ಗೆಲ್ಲುವ ಹಾಗೂ ಸೋಲುವ ಅಭ್ಯರ್ಥಿಗಳ ನಡುವಿನ ಅಂತರ ಒಟ್ಟು ಮತದಾನದ ಶೇಕಡ ಐದಕ್ಕಿಂತ ಹೆಚ್ಚಿದ್ದರೆ ವಿಳಂಬ ಮಾಡದೇ ಫಲಿತಾಂಶ ಪ್ರಕಟಿಸಲು ಚುನಾವಣಾ ಅಧಿಕಾರಿಗೇ ಅಧಿಕಾರ ನೀಡುವ ಮಹತ್ವದ ನಿರ್ಧಾರವನ್ನು ಚುನಾವಣಾ ಆಯೋಗ ಇಂದು ತೆಗೆದುಕೊಂಡಿತು.

ಈ ಅಂತರ ಶೇಕಡ ಐದಕ್ಕಿಂತ ಕಡಿಮೆ ಇದ್ದರೆ ಫಲಿತಾಂಶ ಪ್ರಕಟಕ್ಕೆ ಮುನ್ನ ಚುನಾವಣಾ ಅಧಿಕಾರಿಗಳು ಆಯೋಗದ ಅನುಮತಿ ಪಡೆದುಕೊಳ್ಳಬೇಕು ಎಂದು ಆಯೋಗದ ವಕ್ತಾರರು ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.