ADVERTISEMENT

25 ವರ್ಷಗಳ ಹಿಂದೆ: ಗುರುವಾರ, 2–4–1998

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2023, 19:31 IST
Last Updated 1 ಏಪ್ರಿಲ್ 2023, 19:31 IST
   

l ಮೇ ಅಂತ್ಯದೊಳಗೆ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಗೆ ನಿರ್ಧಾರ

ಬೆಂಗಳೂರು, ಏ. 1– ರಾಜ್ಯ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಯನ್ನು ಮೇ 31ರ ಒಳಗೆ ಮುಗಿಸುವಂತೆ ರಾಜ್ಯ ಸಚಿವ ಸಂಪುಟ ಇಂದು ಇಲ್ಲಿ ತೀರ್ಮಾನ ಕೈಗೊಂಡಿತು.

ಈ ವಿಷಯವನ್ನು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ ವಾರ್ತಾ ಮತ್ತು ಪ್ರಚಾರ ಖಾತೆ ಸಚಿವ ಎಂ.ಸಿ. ನಾಣಯ್ಯ, ‘ಒಮ್ಮೆ ವರ್ಗಾವಣೆ ಮಾಡಿದ ನಂತರ ಅದನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ವಿಶೇಷ ಸಂದರ್ಭದಲ್ಲಿ ಅಂತಹ ಪ್ರಕರಣಗಳ ಬಗ್ಗೆ ಮುಖ್ಯಮಂತ್ರಿ ಅವರಷ್ಟೇ ತೀರ್ಮಾನ ಕೈಗೊಳ್ಳುವರು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.