ADVERTISEMENT

25 ವರ್ಷಗಳ ಹಿಂದೆ: ಸೋಮವಾರ, 6-6-1996

​ಪ್ರಜಾವಾಣಿ ವಾರ್ತೆ
Published 5 ಮೇ 2021, 19:30 IST
Last Updated 5 ಮೇ 2021, 19:30 IST
   

ಕಾಂಗ್ರೆಸ್‌ ನಾಯಕತ್ವ ಘರ್ಷಣೆ ಇಲ್ಲ: ರಾವ್‌

ವಾಯುಪಡೆ ವಿಶೇಷ ವಿಮಾನ, ಮೇ 5 (ಪಿಟಿಐ)– ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್‌ ಐ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಆಂತರಿಕ ಘರ್ಷಣೆ ಉಂಟಾಗುವ ಸಾಧ್ಯತೆಯನ್ನು ತಳ್ಳಿಹಾಕಿದ ಪ್ರಧಾನಿ ಪಿ.ವಿ.ನರಸಿಂಹ ರಾವ್, ತಮ್ಮ ಪಕ್ಷ ಪೂರ್ಣ ಬಹುಮತದೊಂದಿಗೆ ಕೇಂದ್ರದಲ್ಲಿ ಮತ್ತೆ ಸರ್ಕಾರ ರಚಿಸುವುದು ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ಹಿಂದಿರುಗುವಾಗ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಹುದ್ದೆ ಹಾಗೂ ಪಕ್ಷದ ಅಧ್ಯಕ್ಷ ಗಾದಿಯನ್ನು ಒಬ್ಬರೇ ಹೊಂದಿರಬಾರದು ಎಂಬ ಪಕ್ಷದ ಹಿರಿಯ ನಾಯಕ ಕೆ.ಕರುಣಾಕರನ್‌ ಅವರ ಹೇಳಿಕೆ ಬಗ್ಗೆ ಗಮನ ಸೆಳೆದಾಗ ಹೀಗೆ ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.