ಬೆಂಗಳೂರು, ಏ. 6– ಹಿಂದುಳಿದ ವರ್ಗದವರಿಗೂ ಇನ್ನುಮುಂದೆ ಬಡ್ತಿಯಲ್ಲಿ ಮೀಸಲಾತಿ ಕಲ್ಪಿಸಲು ಇಂದು ನಡೆದ ಸಚಿವ ಸಂಪುಟದ ಸಭೆ ತಾತ್ವಿಕವಾಗಿ ಒಪ್ಪಿಗೆ ನೀಡಿತು.
ಸಂಪುಟ ಸಭೆಯ ನಂತರ ವಾರ್ತಾ ಮತ್ತು ಪ್ರಸಾರ ಸಚಿವ ಎಂ.ಪಿ. ಪ್ರಕಾಶ್ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿ, ‘ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ 1997ರಲ್ಲಿ ಹೊರಡಿಸಲಾಗಿದ್ದ ಸರ್ಕಾರಿ ಆದೇಶದಲ್ಲಿದ್ದ ಉತ್ತಮ ಅಂಕಿಅಂಶಗಳು ಕಳೆದ ಫೆಬ್ರುವರಿಯಲ್ಲಿ ಕೈಬಿಟ್ಟು ಹೋಗಿದ್ದರೆ, ಅಂಥವುಗಳನ್ನೂ ಸೇರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.