ಕಾವೇರಿ: ಪ್ರಾಧಿಕಾರಕ್ಕೆ ಬದಲಾಗಿ ಸಮನ್ವಯ ಸಮಿತಿ– ರಾಜ್ಯ ಸಲಹೆ
ಬೆಂಗಳೂರು, ಸೆಪ್ಟೆಂಬರ್ 3– ಕಾವೇರಿ ನದಿ ಜಲ ವಿವಾದಕ್ಕೆ ಸಂಬಂಧಿಸಿದ ನ್ಯಾಯ ಮಂಡಲಿ ಇನ್ನೂ ತನ್ನ ಅಂತಿಮ ತೀರ್ಪು ನೀಡದಿರುವ ಈ ಹಂತದಲ್ಲಿ ಕಾವೇರಿ ನದಿ ಪ್ರಾಧಿಕಾರದ ರಚನೆ ಅಗತ್ಯವಿಲ್ಲ. ಆದರೆ ಅದರ ಬದಲಿಗೆ ಸಮನ್ವಯ ಸಮಿತಿಯೊಂದನ್ನು ರಚಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಸರ್ವಪಕ್ಷಗಳ ಸಭೆಯಲ್ಲಿ ಕೈಗೊಂಡ ಈ ತೀರ್ಮಾನವನ್ನು ಭಾರಿ ನೀರಾವರಿ ಸಚಿವ ಕೆ.ಎನ್. ನಾಗೇಗೌಡ ಅವರು ಇಂದು ಉಭಯ ಸದನಗಳಲ್ಲಿ ಪ್ರಕಟಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.