ADVERTISEMENT

25 ವರ್ಷಗಳ ಹಿಂದೆ: ಗುರುವಾರ, 11–4–1996

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2021, 19:31 IST
Last Updated 10 ಏಪ್ರಿಲ್ 2021, 19:31 IST
   

ಭಟ್ಕಳದ ಶಾಸಕ ಚಿತ್ತರಂಜನ್ ಹತ್ಯೆ

ಕಾರವಾರ, ಏ. 10– ಹಾಲಿ ವಿಧಾನಸಭೆಯಲ್ಲಿ ಭಾರತೀಯ ಜನತಾ ಪಕ್ಷದ ಶಾಸಕರಾಗಿದ್ದ ಭಟ್ಕಳದ ಡಾ.ಯು. ಚಿತ್ತರಂಜನ್‌ (54) ಅವರನ್ನು ಇಂದು ರಾತ್ರಿ ಅಪರಿಚಿತರು ಅವರ ಮನೆಯಲ್ಲಿ ಗುಂಡಿಕ್ಕಿ ಕೊಂದಿದ್ದಾರೆ.

ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿ, ಅಲ್ಲಿ ಚಿತ್ರರಂಜನ್ ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಬಿಜೆಪಿ ಕಾರ್ಯಕರ್ತರ ಸಭೆ ಮುಗಿಸಿ ರಾತ್ರಿ 9.30ರ ಸುಮಾರಿಗೆ ಮನೆಗೆ ಬಂದು ದೂರದರ್ಶನದಲ್ಲಿ ವಾರ್ತೆಗಳನ್ನು ವೀಕ್ಷಿಸುತ್ತಿದ್ದಾಗ ಕಿಟಕಿ ಮೂಲಕ ಅಪರಿಚಿತರು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT