ADVERTISEMENT

25 ವರ್ಷಗಳ ಹಿಂದೆ: ಗುರುವಾರ, ಮಾರ್ಚ್ 27, 1997

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2022, 19:31 IST
Last Updated 26 ಮಾರ್ಚ್ 2022, 19:31 IST
   

‘ಧರ್ಮಕಾರಣ ಮುಟ್ಟುಗೋಲು’
ಬೆಂಗಳೂರು, ಮಾ.26–
ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ವಿವಾದದ ಬಿರುಗಾಳಿಯನ್ನೇ ಎಬ್ಬಿಸಿದ್ದ ಡಾ.ಪಿ.ವಿ.ನಾರಾಯಣ ಅವರು ಬರೆದಿರುವ ‘ಧರ್ಮಕಾರಣ’ ಕಾದಂಬರಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಸರ್ಕಾರ ತೀರ್ಮಾನಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ಲೀಲಾದೇವಿ ಆರ್‌.ಪ್ರಸಾದ್‌ ಅವರು ಇಂದು ವಿಧಾನಮಂಡಲದ ಉಭಯಸದನಗಳಲ್ಲಿ ಪ್ರಕಟಿಸಿದರು.

ಈ ಕೃತಿಯ ಬಗ್ಗೆ ಎರಡೂ ಸದನಗಳಲ್ಲಿ ನಡೆದ ಚರ್ಚೆ, ಸದಸ್ಯರು ವ್ಯಕ್ತಪಡಿಸಿದ ಭಾವನೆಗಳಿಗೆ ಸ್ಪಂದಿಸಿ ಸರ್ಕಾರ, ಸಿಆರ್‌ಪಿಸಿ ಸೆಕ್ಷನ್‌ 95ರ ಅನ್ವಯ ಈ ಕಾದಂಬರಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT