ADVERTISEMENT

25 ವರ್ಷಗಳ ಹಿಂದೆ: ಶನಿವಾರ 6.7.1996

​ಪ್ರಜಾವಾಣಿ ವಾರ್ತೆ
Published 5 ಜುಲೈ 2021, 19:31 IST
Last Updated 5 ಜುಲೈ 2021, 19:31 IST
   

‘ಸರ್ಕಾರಿ ನೌಕರರಿಗೆ ಬೋನಸ್ ಇಲ್ಲ’
ಬೆಂಗಳೂರು, ಜುಲೈ 5– ಸರ್ಕಾರಿ ನೌಕರರಿಗೆ ಬೋನಸ್ ನೀಡಬೇಕು ಎನ್ನುವುದೇ ಅವಾಸ್ತವ ಎಂದು ವಿಧಾನ ಪರಿಷತ್ತಿನಲ್ಲಿ ಇಂದು ಹೇಳಿದ ಅರ್ಥ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೌಕರರ ಈ ಬೇಡಿಕೆಯನ್ನು ಸರ್ಕಾರ ತಿರಸ್ಕರಿಸಿದೆ ಎಂದು ಸ್ಪಷ್ಟಪಡಿಸಿದರು.

ಉದ್ಯಮಗಳಲ್ಲಿ ಬರುವ ಲಾಭಾಂಶದಲ್ಲಿ ಒಂದು ಪಾಲನ್ನು ಕಾರ್ಮಿಕರೊಂದಿಗೆ ಹಂಚಿಕೊಳ್ಳಬೇಕೆಂಬ ಕಲ್ಪನೆಯ ರೂಪದಲ್ಲಿ ಬಂದ ಪದ್ಧತಿ ಬೋನಸ್. ಅದನ್ನು ಸರ್ಕಾರಿ ನೌಕರರಿಗೂ ಅನ್ವಯಿಸಬೇಕು ಎಂಬ ಕಲ್ಪನೆಯೇ ಸರಿಯಲ್ಲ ಎಂದು ಉಪ
ಮುಖ್ಯಮಂತ್ರಿ ವಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT