‘ಅರೆಕಾಲಿಕ ಬೋಧಕರ ನೇಮಕ ಸುಪ್ರೀಂ ಕೋರ್ಟ್ ನಿಷೇಧ’
ಬೆಂಗಳೂರು, ಜುಲೈ 8– ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ ಅರೆಕಾಲಿಕ ಉಪನ್ಯಾಸಕರ ನೇಮಕವನ್ನು ನಿಷೇಧಿಸಿ ಸರ್ಕಾರ ಆಜ್ಞೆ ಹೊರಡಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಬಿ. ಸೋಮಶೇಖರ್ ವಿಧಾನ ಪರಿಷತ್ತಿನಲ್ಲಿ ಇಂದು ಸ್ಪಷ್ಟಪಡಿಸಿದರು.
‘ಇನ್ನು ಮುಂದೆ ಯಾವುದೇ ಕಾರಣಕ್ಕೆ ಅರೆಕಾಲಿಕ ಇಲ್ಲವೇ ಗುತ್ತಿಗೆ ಆಧಾರದ ಮೇಲೆ ಉಪನ್ಯಾಸಕರನ್ನು ನೇಮಿಸಿಕೊಳ್ಳಬಾರದು ಅಗತ್ಯವಿದ್ದರೆ ಒಂದೇ ಬಾರಿಗೆ ಕಾಯಂ ಉಪನ್ಯಾಸಕರನ್ನು ನೇಮಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟ ಆದೇಶ ನೀಡಿದೆ. ಇದನ್ನು ಪಾಲಿಸುವುದು ಸರ್ಕಾರಕ್ಕೆ ಅನಿವಾರ್ಯವಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.