ಒತ್ತಡಕ್ಕೆ ಮಣಿದ ರಾವ್ ಕೊನೆಗೂ ನಿರ್ಗಮನ
ನವದೆಹಲಿ, ಡಿ. 19 (ಪಿಟಿಐ)– ಕಾಂಗ್ರೆಸ್ ಸಂಸದೀಯ ಪಕ್ಷದ ಕಾರ್ಯಕಾರಿಣಿಯ ಒತ್ತಡಕ್ಕೂ ಜಗ್ಗದೆ, ವಿರೋಧಿ ಗುಂಪಿನ ಆಗ್ರಹಕ್ಕೂ ಮಣಿಯದೆ, ಸಂಸದೀಯ ಪಕ್ಷದ ಸರ್ವ ಸದಸ್ಯರ ಸಭೆಯಲ್ಲಿ ಬಲಾಬಲ ಪ್ರದರ್ಶನಕ್ಕೆ ಸಿದ್ಧರಾಗಿದ್ದ ಮಾಜಿ ಪ್ರಧಾನಿ ನರಸಿಂಹರಾವ್ ಅವರು ಪಕ್ಷದ ಅಧ್ಯಕ್ಷರ ಸೂಚನೆ ಮೇರೆಗೆ ಕೊನೆ ಕ್ಷಣದಲ್ಲಿ ರಾಜೀನಾಮೆ ನೀಡುವುದರೊಂದಿಗೆ ಎರಡು ದಿನಗಳ ರಾಜಕೀಯ ನಾಟಕಕ್ಕೆ ಅಂತಿಮ ತೆರೆ ಬಿದ್ದಂತಾಗಿದೆ.
ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಕೇಂದ್ರ ಅಸ್ತು
ನವದೆಹಲಿ, ಡಿ. 19– ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ಖಾಸಗಿ ವಲಯದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಕೇಂದ್ರ ಸರ್ಕಾರ ಕರ್ನಾಟಕ ಸರ್ಕಾರಕ್ಕೆ ಒಪ್ಪಿಗೆ ನೀಡಿದೆ ಎಂದು ನಾಗರಿಕ ವಿಮಾನಯಾನ ಖಾತೆ ಸಚಿವ ಸಿ.ಎಂ. ಇಬ್ರಾಹಿಂ ಲೋಕಸಭೆಗೆ ತಿಳಿಸಿದರು.
ಚಿಕ್ಕಮಗಳೂರು ಕ್ಷೇತ್ರದ ಬಿ.ಎಲ್.ಶಂಕರ್ ಅವರಿಗೆ ಲಿಖಿತ ಉತ್ತರ ನೀಡಿರುವ ಸಚಿವರು, ಹಾಸನದಲ್ಲಿ ಏರ್ ಸ್ಟ್ರಿಪ್ಸ್ನ್ನು ಉನ್ನತೀಕರಿಸಲು ನಿರ್ಧರಿಸಿದೆ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.