ADVERTISEMENT

25 ವರ್ಷಗಳ ಹಿಂದೆ: ಗುರುವಾರ, ಜನವರಿ 15, 1998

​ಪ್ರಜಾವಾಣಿ ವಾರ್ತೆ
Published 14 ಜನವರಿ 2023, 19:31 IST
Last Updated 14 ಜನವರಿ 2023, 19:31 IST
   

ಎಂ.ಎಸ್‌. ಸುಬ್ಬಲಕ್ಷ್ಮಿ ‘‌ಭಾರತ ರತ್ನ’
ನವದೆಹಲಿ, ಜ. 14 (ಯುಎನ್‌ಐ)–
ಕಾರ್ನಾಟಕ ಸಂಗೀತ ಪರಂಪ‍ರೆಯ ವಿಖ್ಯಾತ ವಿದುಷಿ ಎಂ.ಎಸ್‌. ಸುಬ್ಬಲಕ್ಷ್ಮಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ದ ಗೌರವವನ್ನು ಇಂದು ಪ್ರಕಟಿಸಲಾಗಿದೆ.

ಸುಬ್ಬಲಕ್ಷ್ಮಿ ಅವರ ಸಂಗೀತ ಕ್ಷೇತ್ರದಲ್ಲಿನ ಕೊಡುಗೆಗಾಗಿ ಅವರಿಗೆ ಪ್ರಸಕ್ತ ಸಾಲಿನ ‘ಭಾರತ ರತ್ನ’ ನೀಡಲಾಗಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. ಈ ಮೊದಲು ಕ್ಷಿಪಣಿ ತಂತ್ರಜ್ಞಾನದ ವಿಜ್ಞಾನಿ ಎ.ಪಿ.ಜೆ. ಅಬ್ದುಲ್‌ ಕಲಾಮ್‌ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT