ADVERTISEMENT

25 ವರ್ಷಗಳ ಹಿಂದೆ: ಕಾಂಗ್ರೆಸ್‌ ಚುನಾವಣಾ ಪ್ರಚಾರಕ್ಕೆ ಸೋನಿಯಾ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2022, 19:02 IST
Last Updated 29 ಡಿಸೆಂಬರ್ 2022, 19:02 IST
   

ಡಾ. ಚಿದಾನಂದ ಮೂರ್ತಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ನವದೆಹಲಿ, ಡಿಸೆಂಬರ್‌ 29– ಕನ್ನಡದ ಖ್ಯಾತ ಸಂಶೋಧಕ ಡಾ. ಎಂ.ಚಿದಾನಂದ ಮೂರ್ತಿ ಅವರ ‘ಹೊಸತು ಹೊಸತು’ ಪ್ರಬಂಧ ಸಂಕಲನಕ್ಕೆ 1997ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.

25 ಸಾವಿರ ನಗದು ಹಾಗೂ ಕಂಚಿನ ಫಲಕವನ್ನು ಪ್ರಶಸ್ತಿ ಒಳಗೊಂಡಿದೆ.

ADVERTISEMENT

ಇಂದು ಡಾ. ಯು.ಆರ್‌. ಅನಂತಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಾಹಿತ್ಯ ಅಕಾಡೆಮಿ ಕಾರ್ಯಕಾರಿ ಸಮಿತಿ ಸಭೆಯು ಭಾರತೀಯ ಭಾಷೆಗಳ ಒಟ್ಟು 21 ಲೇಖಕರ ಕೃತಿಗಳಿಗೆ ಪ್ರಸಕ್ತ ಸಾಲಿನ ಪ್ರಶಸ್ತಿಗಳನ್ನು ಆಯ್ಕೆ ಮಾಡಿತು.

ಕಾಂಗ್ರೆಸ್‌ ಚುನಾವಣಾ ಪ್ರಚಾರಕ್ಕೆ ಸೋನಿಯಾ

ನವದೆಹಲಿ, ಡಿಸೆಂಬರ್ 29– ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಮತ್ತು ಕಾರ್ಯಕಾರಿಣಿ ಸದಸ್ಯರ ಮನವಿಯನ್ನು ಕೊನೆಗೂ ಒಪ್ಪಿರುವ ಸೋನಿಯಾ ಗಾಂಧಿ ಅವರು, ಬರುವ ಮಧ್ಯಂತರ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಪರವಾಗಿ ಪ್ರಚಾರ ಕೈಗೊಳ್ಳಲು ಇಂದು ನಿರ್ಧರಿಸಿದರು.

ಸೋನಿಯಾ ಅವರ ಈ ತೀರ್ಮಾನದಿಂದ ಕಾಂಗ್ರೆಸ್‌ ಇತ್ತೀಚಿನ ವರ್ಷಗಳಲ್ಲಿ ಕಳೆದುಕೊಂಡಿದ್ದ ನೆಹರೂ–ಇಂದಿರಾ ಗಾಂಧಿ ಕುಟುಂಬದ ಪಾತ್ರವು ಚುನಾವಣಾ ರಾಜಕೀಯ ರಂಗದಲ್ಲಿ ಮತ್ತೆ ವಿಜೃಂಭಿಸಲಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.