ADVERTISEMENT

ಸೋಮವಾರ, 27–12–1993

25 ವರ್ಷಗಳ ಹಿಂದೆ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2018, 19:58 IST
Last Updated 26 ಡಿಸೆಂಬರ್ 2018, 19:58 IST

ಶಂಕರಾನಂದ, ಠಾಕೂರ್ ರಾಜೀನಾಮೆ– ರಾವ್ ನಿರೀಕ್ಷೆ

ನವದೆಹಲಿ, ಡಿ. 26 (ಯುಎನ್‌ಐ, ಪಿಟಿಐ)– ಪ್ರಧಾನಿ ಪಿ.ವಿ. ನರಸಿಂಹರಾವ್ ಅವರು ಆರೋಗ್ಯ ಸಚಿವ ಬಿ. ಶಂಕರಾನಂದ ಹಾಗೂ ಗ್ರಾಮೀಣ ಅಭಿವೃದ್ಧಿ ರಾಜ್ಯ ಸಚಿವ ರಾಮೇಶ್ವರ್ ಠಾಕೂರ್ ಅವರ ರಾಜೀನಾಮೆಗಳನ್ನು ನಿರೀಕ್ಷಿಸುತ್ತಿದ್ದಾರೆ ಎಂದು ರಾಜಕೀಯ ಮೂಲಗಳು ತಿಳಿಸಿರುವುದಾಗಿ ವಾರ್ತಾ ಸಂಸ್ಥೆಗಳು ವರದಿ ಮಾಡಿದ್ದು ರಾವ್ ಅವರು ಇಂದು ರಾಷ್ಟ್ರಪತಿ ಶಂಕರ ದಯಾಳ್ ಶರ್ಮ ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.

ಜೆಪಿಸಿ ವರದಿಯು ಶಂಕರಾನಂದ ಹಾಗೂ ರಾಮೇಶ್ವರ ಠಾಕೂರ್ಅವರನ್ನು ನಿರ್ದಿಷ್ಟವಾಗಿ ಹೆಸರಿಸಿ ಟೀಕಿಸಿರುವ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಬೇಕು ಎಂದುಪ್ರತಿಪಕ್ಷಗಳು ತೀವ್ರವಾಗಿ ಒತ್ತಾಯ ಮಾಡುತ್ತಿವೆ.

ADVERTISEMENT

ಜಡಭರತ ಇನ್ನಿಲ್ಲ

ಹುಬ್ಬಳ್ಳಿ, ಡಿ. 26– ಖ್ಯಾತ ನಾಟಕಕಾರ ಹಾಗೂ ಮನೋಹರ ಗ್ರಂಥಮಾಲೆಯ ಸ್ಥಾಪಕರಾದ ಜಡಭರತರೆಂದೇ ಖ್ಯಾತಿ ಪ‍ಡೆದಿದ್ದ ಗೋವಿಂದಾಚಾರ್ಯ ಭೀಮಾಚಾರ್ಯ ಜೋಶಿ (89) ಅವರು ಇಂದು ರಾತ್ರಿ ಇಲ್ಲಿ ನಿಧನರಾದರು.

ಬಿಕ್ಕಟ್ಟು ಇತ್ಯರ್ಥಕ್ಕೆ ಜನವರಿ ಮೊದಲ ವಾರ ಪ್ರಧಾನಿ ಬೆಂಗಳೂರಿಗೆ

ಬೆಂಗಳೂರು, ಡಿ. 26– ರಾಜ್ಯ ಕಾಂಗ್ರೆಸ್‌ನ ಬಿಕ್ಕಟ್ಟನ್ನು ಬಗೆಹರಿಸುವ ಸಂಬಂಧದಲ್ಲಿ ಎಐಸಿಸಿ ಅಧ್ಯಕ್ಷರೂ ಆದ ಪ್ರಧಾನಿ ಪಿ.ವಿ. ನರಸಿಂಹರಾವ್ ಅವರು ತಾವೇ ಖುದ್ದಾಗಿ ಜನವರಿ ಮೊದಲ ವಾರದಲ್ಲಿ ಬೆಂಗಳೂರಿಗೆ ಬರುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.