ADVERTISEMENT

50 ವರ್ಷಗಳ ಹಿಂದೆ | ಶುಕ್ರವಾರ, 13-3-1970

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2020, 19:40 IST
Last Updated 12 ಮಾರ್ಚ್ 2020, 19:40 IST

ಕಾವೇರಿ: ರಾಜ್ಯದ ಹಕ್ಕು ರಕ್ಷಿಸಲು ಪಂಚಾಯಿತಿಗೆ ಹೋಗಲು ಒತ್ತಾಯ
ಬೆಂಗಳೂರು, ಮಾರ್ಚ್‌ 12– ಕಾವೇರಿ ನೀರಿನಲ್ಲಿ ಮೈಸೂರು ರಾಜ್ಯದ ಹಕ್ಕನ್ನು ರಕ್ಷಿಸಲು ತತ್‌ಕ್ಷಣ ಪಂಚಾಯಿತಿಗೆ ಹೋಗಬೇಕೆಂದು ಇಂದು ವಿಧಾನಸಭೆಯಲ್ಲಿ ಸದಸ್ಯರು ಒತ್ತಾಯ ಸಲ್ಲಿಸಿದರು.

ಕೇಂದ್ರ ಮಂತ್ರಿ ಡಾ. ಕೆ.ಎಲ್‌.ರಾವ್‌ ಅವರು ಸಂಸತ್ತಿನಲ್ಲಿ ಮೈಸೂರು, ಹೇಮಾವತಿ ಮೊದಲಾದ ಯೋಜನೆಗಳನ್ನು ತತ್‌ಕ್ಷಣ ನಿಲ್ಲಿಸಬೇಕೆಂದು ಸಲಹೆ ಮಾಡಿದುದರ ಬಗ್ಗೆ ಎರಡೂವರೆ ಗಂಟೆಗಳ ವಿಶೇಷ ಸೂಚನೆಯನ್ನು ಹಲವು ಸದಸ್ಯರು ಮಂಡಿಸಿದರು. ಡಾ. ರಾವ್‌ ಮತ್ತು ಕೇಂದ್ರ ಸರ್ಕಾರದ ವರ್ತನೆಯನ್ನು ಕಟುವಾಗಿ ಟೀಕಿಸಿದರು.

‘ಭಾಷಾ ಆಧಾರದ ಮೇಲೆ ಗಡಿಗಳ ಪುನರ್‌ರಚನೆಯಿಂದ ಅನಾಹುತ’
ಬೆಂಗಳೂರು, ಮಾರ್ಚ್‌ 12– ರಾಜ್ಯಗಳ ಗಡಿಯನ್ನು ಭಾಷಾ ಆಧಾರದ ಮೇಲೆ ಪುನರ್‌ರಚಿಸುವುದು ತೀವ್ರ ಅನಾಹುತಕ್ಕೆ ಎಡೆಗೊಡುವುದೆಂದು ರಾಜ್ಯದ ನಾಲ್ಕು ಮಂದಿ ಹಿರಿಯರು ಎಚ್ಚರಿಕೆ ನೀಡಿದ್ದಾರೆ.

ADVERTISEMENT

ಮೈಸೂರಿನ ಮಾಜಿ ದಿವಾನರಾದ ಶ್ರೀ ಎನ್‌. ಮಾಧವರಾವ್‌, ಶ್ರೀ ಸಿ.ಎಸ್‌.ವೆಂಕಟಾಚಾರ್‌, ಡಾ. ಡಿ.ವಿ. ಗುಂಡಪ್ಪ ಮತ್ತು ಪಿ.ಕೋದಂಡರಾವ್‌ ಅವರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.