ADVERTISEMENT

50 ವರ್ಷಗಳ ಹಿಂದೆ| ಸೋಮವಾರ, 18–5–1970

​ಪ್ರಜಾವಾಣಿ ವಾರ್ತೆ
Published 17 ಮೇ 2020, 22:17 IST
Last Updated 17 ಮೇ 2020, 22:17 IST

ರಾಜ್ಯದ ಕಾವೇರಿ ಯೋಜನೆಗಳಿಗೆ 3 ತಿಂಗಳಲ್ಲಿ ಮಂಜೂರಾತಿ?

ಬೆಂಗಳೂರು, ಮೇ 17– ರಾಜ್ಯದ ಕಾವೇರಿ ಯೋಜನೆಗಳಿಗೆ ಮೂರು ತಿಂಗಳಲ್ಲಿ ಮಂಜೂರಾತಿ ಸಿಕ್ಕುವ ಆಶಯವನ್ನು ಮುಖ್ಯಮಂತ್ರಿ ಶ್ರೀ ವೀರೇಂದ್ರ ಪಾಟೀಲ್‌ರವರು ಇಂದು ಇಲ್ಲಿ ವ್ಯಕ್ತಪಡಿಸಿದರು.

ಮೈಸೂರಿನ ಯೋಜನೆಗಳಿಗೆ ಕೇಂದ್ರದ ಮಂಜೂರಾತಿ ದೊರಕಿದ ನಂತರ ತಾವು ಒಪ್ಪಂದಕ್ಕೆ ಸಹಿ ಹಾಕುವುದಾಗಿ ಶ್ರೀ ಪಾಟೀಲರು ವರದಿಗಾರರೊಡನೆ ಮಾತನಾಡುತ್ತಾ ತಿಳಿಸಿದರು.

ADVERTISEMENT

ನಿನ್ನೆ ಮದರಾಸಿನಲ್ಲಿ ನಡೆದ ಕಾವೇರಿ ಜಲ ವಿವಾದ ಕುರಿತ ಸಮ್ಮೇಳನದಲ್ಲಿ ಭಾಗವಹಿಸಿ ಮುಖ್ಯಮಂತ್ರಿಯವರು ಇಂದು ನಗರಕ್ಕೆ ಹಿಂತಿರುಗಿದರು.

ಕೋಮುಭಾವನೆ ವಿರುದ್ಧ ಹೋರಾಡಲು ದೇಶದಾದ್ಯಂತ ಸಾಮೂಹಿಕ ಚಳವಳಿ

ನವದೆಹಲಿ, ಮೇ 17– ಕೋಮು ಗಲಭೆಗಳ ಭೀಕರತೆ ಮತ್ತು ಕೆಡುಕಿನ ವಿರುದ್ಧ ಹೋರಾಡುವುದಕ್ಕಾಗಿ ಸರ್ವ ಪಕ್ಷಗಳ ಜಂಟಿ ಸಾಮೂಹಿಕ ಚಳವಳಿಯನ್ನು ಶೀಘ್ರದಲ್ಲೇ ರಾಷ್ಟ್ರದಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿದೆ.

ಈ ತಿಂಗಳು 22ರಂದು ನವದೆಹಲಿಯಲ್ಲಿ ನಡೆಯಲಿರುವ ನಾನಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಂದ ಕೂಡಿದ ವ್ಯವಸ್ಥಾಪಕ ಸಮಿತಿಯ
ಸಭೆಯಲ್ಲಿ ಚಳವಳಿಯ ವಿವರ ಕುರಿತು ಚರ್ಚಿಸಲಾಗುವುದು. ಪ್ರಧಾನಿ ಇಂದಿರಾ ಗಾಂಧಿ ಅವರು ಈ ಸಭೆಯ ಅಧ್ಯಕ್ಷತೆ ವಹಿಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.