ಪಕ್ಷದಘಟನೆಮೇರೆಗೆ ಕೆಂಗಲ್ರ ವಿರುದ್ಧ ಕ್ರಮಕ್ಕೆ ಅರಸು ಸಲಹೆ
ಬೆಂಗಳೂರು, ಆಗಸ್ಟ್ 27– ಕೆ. ಹನುಮಂತಯ್ಯನವರ ಹೇಳಿಕೆಗಳು ಮತ್ತು ಚಟುವಟಿಕೆಗಳ ಬಗ್ಗೆಪಕ್ಷದನಿಯಮಾವಳಿಗೆ ಅನುಗುಣವಾಗಿ ಕ್ರಮ ಕೈಗೊಳ್ಳುವುದು ಕಾಂಗ್ರೆಸ್ ಹೈಕಮಾಂಡ್ಗೆ ಬಿಟ್ಟಿದದ್ದೆಂದು ಮುಖ್ಯಮಂತ್ರಿ ಡಿ. ದೇವರಾಜ ಅರಸು ಇಂದು ವರದಿಗಾರರ ಪ್ರಶ್ನೆಯೊಂದಕ್ಕೆ ಉತ್ತರವಿತ್ತರು.
ದೆಹಲಿಯಿಂದ ಹಿಂದಿರುಗಿದ ಮುಖ್ಯಮಂತ್ರಿಯವರು, ಅದರ ವಿಚಾರದಲ್ಲಿ ಕೇಂದ್ರ ನಾಯಕರು ನನ್ನ ಪ್ರತಿಕ್ರಿಯೆ ಕೇಳಿದರು.ಪಕ್ಷದನಿಯಮಾವಳಿ ಇದೆ. ಅದರ ಪ್ರಕಾರ ಪರಿಸ್ಥಿತಿ ತೀವ್ರತೆ ಎಷ್ಟರ ಮಟ್ಟಿಗೆ ಇದೆಯೋ ಅದರ ಪ್ರಕಾರ ಕ್ರಮ ತೆಗೆದುಕೊಳ್ಳಿ ಅಂತ ಹೇಳಿದೆ ಎಂದು ವಿವರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.