ADVERTISEMENT

50 ವರ್ಷಗಳ ಹಿಂದೆ: ಗುರುವಾರ, 16 ನವೆಂಬರ್ 1972

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2022, 20:15 IST
Last Updated 15 ನವೆಂಬರ್ 2022, 20:15 IST
   

ಪಾಕಿಸ್ತಾನದ ಬಗೆಗೆ ಭಾರತದ ಸಹಾನುಭೂತಿಗೆ ಭುಟ್ಟೋ ಕರೆ
ಮುಂಬೈ, ನ. 15–
ಪಾಕಿಸ್ತಾನದ ಪರಿಸ್ಥಿತಿಯನ್ನು ಉಭಯ ದೇಶಗಳ ಸೌಹಾರ್ದಯುತ ಸಂಬಂಧದ ದೃಷ್ಟಿಯಿಂದ ಭಾರತವು ಸಹಾನುಭೂತಿಯಿಂದ ಅರ್ಥ ಮಾಡಿಕೊಳ್ಳಬೇಕು ಎಂದು ಅಧ್ಯಕ್ಷ ಭುಟ್ಟೋ ಮನವಿ ಮಾಡಿಕೊಂಡಿದ್ದಾರೆ.

ಏಕೆಂದರೆ ಪಾಕಿಸ್ತಾನವು ಎರಡು ಅತಿ ಕ್ಲಿಷ್ಟಕರ ನಿರ್ಧಾರಗಳನ್ನು ಕೈಗೊಳ್ಳಬೇಕಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಅರಸು ಸಂಪುಟದ ವಿರುದ್ಧ ಅವಿಶ್ವಾಸ ಸೂಚನೆ ಮಂಡನೆ
ಕಲ್ಬುರ್ಗಿ, ನ. 15–
ರಾಜ್ಯದ ವಿಧಾನ ಮಂಡಲದ ಮುಂಬರುವ ಅಧಿವೇಶನದಲ್ಲಿ ಅರಸು ಮಂತ್ರಿಮಂಡಲದ ವಿರುದ್ಧ ಸಂಸ್ಥಾ ಕಾಂಗ್ರೆಸ್‌ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸುವುದೆಂದು ಪಕ್ಷದ ಮೂಲಗಳು ತಿಳಿಸಿವೆ.

ADVERTISEMENT

ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಕ್ಷಾಮ ಪರಿಸ್ಥಿತಿ ಎದುರಿಸುವಲ್ಲಿ ಅರಸು ನೇತೃತ್ವದ ಸರ್ಕಾರ ವಿಫಲವಾಗಿದೆಯೆಂದು ಸಂಸ್ಥಾ ಕಾಂಗ್ರೆಸ್‌ ಭಾವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.