
ಪ್ರಜಾವಾಣಿ ವಾರ್ತೆ
75 ವರ್ಷಗಳ ಹಿಂದೆ ಈ ದಿನ
ಬೆಂಗಳೂರು, ಫೆ. 9– ಇಂದು ತಮ್ಮ ಮೂರು ದಿನಗಳ ಕೋಲಾರದ ಪ್ರವಾಸ ಮುಗಿಸಿದ ಮುಖ್ಯಮಂತ್ರಿ ಕೆ.ಸಿ. ರೆಡ್ಡಿಯವರು, ನಿನ್ನೆ ಮತ್ತು ಇಂದು ಹೋದ ಸಾರಿ ಮಳೆ ಬಾರದೆ ಕ್ಷಾಮಪೀಡಿತವಾಗಿರುವ ಜಿಲ್ಲೆಯ ಪ್ರದೇಶಗಳಿಗೆ ಭೇಟಿಯಿತ್ತು ಜನ, ಜಾನುವಾರುಗಳ ಸ್ಥಿತಿಗತಿಗಳನ್ನು ವಿಚಾರಿಸಿ, ನಡೆಯುತ್ತಿರುವ ಪರಿಹಾರ ಕಾರ್ಯಗಳನ್ನು ಪರಿಶೀಲಿಸಿ, ಸರ್ಕಾರ ಮುಂದೇನು ಮಾಡಬೇಕು ಎಂಬುದನ್ನು ಅರಿತುಕೊಂಡರು.
ಮೊದಲ ದಿನದಲ್ಲಿ ಕೋಲಾರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕು ಪ್ರವಾಸ ಮುಗಿಸಿದ ಮುಖ್ಯಮಂತ್ರಿ ಅವರು, ಬೌರಿಂಗ್ ಪೇಟೆ, ಮುಳಬಾಗಿಲು, ಕೋಲಾರ, ಬಾಗೇಪಲ್ಲಿ, ಗುಡಿಬಂಡೆ ತಾಲ್ಲೂಕುಗಳ ಕ್ಷಾಮಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.