ವಾರಂಗಲ್, ಆಗಸ್ಟ್ 3 (ಪಿಟಿಐ): ಜಿಲ್ಲೆಯ ತಿಮ್ಮಾಪುರ ಗ್ರಾಮದಲ್ಲಿ ಮಾಯಾಮಂತ್ರದಲ್ಲಿ ತೊಡಗಿದ್ದರು ಎಂದು ಆಪಾದಿಸಿ ಐದು ಮಂದಿಯನ್ನು ಹಿಡಿದಿದ್ದು, ಅವರಲ್ಲಿ ನಾಲ್ಕು ಮಂದಿ ಯನ್ನು ಜೀವಂತವಾಗಿ ಸುಟ್ಟಿದ್ದಾರೆ.
ಕಂಬಾಲಪಲ್ಲಿ: ಸಿಬಿಐ ತನಿಖೆಗೆ
ಬೆಂಗಳೂರು, ಆಗಸ್ಟ್ 3: ಕೋಲಾರ ಜಿಲ್ಲೆ ಕಂಬಾಲಪಲ್ಲಿಯಲ್ಲಿ ನಡೆದ ದಲಿತರ ಮಾರಣಹೋಮದ ಬಗ್ಗೆ ತನಿಖೆಯನ್ನು ಸಿಬಿಐಗೆ ಒಪ್ಪಿಸಲು ಇಂದು ಇಲ್ಲಿ ಸೇರಿದ್ದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿತು.
ಈ ಘಟನೆ ಬಗ್ಗೆ ಸಿಬಿಐನಿಂದ ತನಿಖೆ ನಡೆಸಲಾಗುತ್ತದೆ ಎಂದು ಸರ್ಕಾರ ವಿಧಾನಮಂಡಲಕ್ಕೆ ಆಶ್ವಾಸನೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಸಂಪುಟದ ನಿರ್ಧಾರವನ್ನು ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.