ADVERTISEMENT

25 ವರ್ಷಗಳ ಹಿಂದೆ: ಗಂಗಾಧರ ಮೂರ್ತಿ ಕೊಲೆ ಮೂವರಿಗೆ ಜೀವಾವಧಿ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2025, 23:30 IST
Last Updated 2 ಸೆಪ್ಟೆಂಬರ್ 2025, 23:30 IST
   

ಬೆಂಗಳೂರು, ಸೆಪ್ಟೆಂಬರ್‌ 2– ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ವಕೀಲ ಹಾಗೂ ಪತ್ರಕರ್ತ ಕಂಚನಹಳ್ಳಿ ಗಂಗಾಧರ ಮೂರ್ತಿ ಕೊಲೆ ಪ್ರಕರಣದ ಮೊದಲ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಜ್ಜಿಗೆ ಅವರು, ಇಂದು ಈ ಬಗ್ಗೆ ಆದೇಶ ನೀಡಿದ್ದಾರೆ. ಆರೋಪಿಗಳಾದ ಲೋಕೇಶ್‌ (31), ಸತೀಶ್‌ (28) ಹಾಗೂ ಸ್ವಾಮಿ (25) ಅವರು ಕೊಲೆ ಹಾಗೂ ಸಂಚಿನ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಬೀತಾಗಿರುವುದಾಗಿ ನ್ಯಾಯಾ
ಧೀಶರು ತೀರ್ಪಿನಲ್ಲಿ ತಿಳಿಸಿದ್ದಾರೆ.

ಶೀಘ್ರ ಇತ್ಯರ್ಥಕ್ಕೆ ರಾಜ್ಯದ ಮನವಿ

ADVERTISEMENT

ಬೆಂಗಳೂರು, ಸೆಪ್ಟೆಂಬರ್‌ 2– ಮೈಸೂರಿನ ಕಾರಾಗೃಹದಲ್ಲಿರುವ ವೀರಪ್ಪನ್‌ನ ಸಹಚರರ ಬಿಡುಗಡೆ ವಿರೋಧಿಸಿ ಸಲ್ಲಿಸಲಾಗಿರುವ ವಿಶೇಷ ಮನವಿಯನ್ನು ಶೀಘ್ರ ಇತ್ಯರ್ಥಗೊಳಿಸಬೇಕು ಎಂದು ರಾಜ್ಯ ಸರ್ಕಾರ, ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಲಿದೆ ಎಂದು ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಇಲ್ಲಿ ತಿಳಿಸಿದರು.

ವೀರಪ್ಪನ್‌ನಿಂದ ಹತ್ಯೆಯಾದ ಸಬ್‌ಇನ್‌ಸ್ಪೆಕ್ಟರ್‌ ಶಕೀಲ್‌ ಅಹ್ಮದ್‌ ಅವರ ತಂದೆ ಅಬ್ದುಲ್‌ ಕರೀಂ ಸಲ್ಲಿಸಿರುವ ಈ ಅರ್ಜಿಯ ಮೇಲೆ ಸುಪ್ರೀಂ ಕೋರ್ಟ್‌ ನಿನ್ನೆ ಟಾಡಾ ಕೈದಿಗಳ ಬಿಡುಗಡೆಗೆ ಅನಿರ್ದಿಷ್ಟ ತಡೆ ನೀಡಿರುವ ಹಿನ್ನೆಲೆಯಲ್ಲಿ ಅವರು ಈ ಪ್ರತಿಕ್ರಿಯೆ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.