ADVERTISEMENT

ಪ್ರಜಾವಾಣಿ 25 ವರ್ಷಗಳ ಹಿಂದೆ: ಭಾನುವಾರ 12/11/1995

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2020, 19:30 IST
Last Updated 11 ನವೆಂಬರ್ 2020, 19:30 IST
25 ವರ್ಷಗಳ ಹಿಂದೆ
25 ವರ್ಷಗಳ ಹಿಂದೆ   

ಮೈತ್ರಿಗೆ ಜನತಾ ದಳ ನಿರ್ಧಾರ

ನವದೆಹಲಿ, ನ. 11 (ಯುಎನ್‌ಐ, ಪಿಟಿಐ)– ಬರುವ ಲೋಕಸಭೆ ಮತ್ತು ವಿಧಾನ ಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಮುಲಾಯಂ ಸಿಂಗ್‌ ಯಾದವ್‌ ಅವರ ಸಮಾಜವಾದಿ ಪಕ್ಷದ ಜತೆ ಹೊಂದಾಣಿಕೆ ಮಾಡಿಕೊಳ್ಳುವ ನಿರ್ಧಾರವನ್ನು ಸದ್ಯಕ್ಕೆ ಕೈಬಿಟ್ಟಿದೆ.

ಆದರೆ ಬಹುಜನ ಸಮಾಜ ಪಕ್ಷದ ಜತೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯನ್ನು ಸದ್ಯಕ್ಕೆ ಕೈಬಿಟ್ಟಿದೆ.

ADVERTISEMENT

ಶುಕ್ರವಾರ ಮಧ್ಯರಾತ್ರಿಯವರೆಗೆ ನಡೆದ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು. ಪಕ್ಷದ ಕೈಗೊಂಡ ನಿರ್ಧಾರವನ್ನು ಅಧ್ಯಕ್ಷ ಎಸ್‌.ಆರ್‌. ಬೊಮ್ಮಾಯಿ ಅವರು ಇಂದು ಪ್ರಕಟಿಸಿದರು.

‘ಬಿಜೆಪಿ ಅಧಿಕಾರಕ್ಕೆ ಬಂದರೆ ಅಟಲ್‌ಗೆ ಪ್ರಧಾನಿ ಪಟ್ಟ’

ಮುಂಬೈ, ನ. 11 (ಪಿಟಿಐ): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹಿರಿಯ ನಾಯಕ ಅಟಲ್‌ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗುತ್ತಾರೆ ಎಂದು ಪಕ್ಷದ ಅಧ್ಯಕ್ಷ ಎಲ್‌.ಕೆ. ಅಡ್ವಾಣಿ ಇಂದು ರಾತ್ರಿ ಇಲ್ಲಿ ಘೋಷಿಸಿದರು.

ಕೇಂದ್ರ ಮುಂಬೈನ ಐತಿಹಾಸಿಕ ಶಿವಾಜಿ ಪಾರ್ಕ್‌ನಲ್ಲಿ ಅವರು ಬೃಹತ್‌ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ, ಈ ವಿಷಯವನ್ನು ದೇಶದ ಮೂಲೆ ಮೂಲೆಗೆ ತಲುಪಿಸುವಂತೆ ಪಕ್ಷದ ಕಾರ್ಯಕರ್ತರು ಕರೆ ನೀಡಿದರು.

ಈ ಹಂತದಲ್ಲಿ ಮಾತನಾಡಿದ ವಾಜಪೇಯಿ ಅವರು, ಪ್ರಧಾನಿ ಯಾತಾಗುತ್ತಾರೆ ಎಂದು ವಿಷಯದತ್ತ ಗಮನ ಕೊಡದೆ ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚಿಸುವುದು ಪಕ್ಷಕ್ಕೆ ಈಗಿನ ಸಂದರ್ಭದಲ್ಲಿ ಹೆಚ್ಚು ಮಹತ್ವಪೂರ್ಣ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.