ಖಾಸಗಿ ಹಣಕಾಸು ಸಂಸ್ಥೆಗಳಿಂದ ವಂಚನೆ ತಡೆಗೆ ಕಾನೂನು
ನವದೆಹಲಿ, ಡಿ.4 (ಯುಎನ್ಐ)–ಖಾಸಗಿ ಹಣಕಾಸು ಸಂಸ್ಥೆಗಳು ಜನರಿಗೆ ವಂಚನೆ ಮಾಡದೆ ಕಾನೂನುಬದ್ಧವಾಗಿ ಕೆಲಸ ನಿರ್ವಹಿಸುವಂತೆ ನೋಡಿಕೊಳ್ಳಲು ಕೇಂದ್ರವು ಶೀಘ್ರವೇ ಸಮಗ್ರ ಕಾಯ್ದೆಯೊಂದನ್ನು ಜಾರಿಗೆ ತರಲಿದೆ.
ಇಂದು ರಾಜ್ಯಸಭೆಗೆ ಈ ವಿಷಯ ತಿಳಿಸಿದ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ, ‘ಮಸೂದೆ ಈಗಾಗಲೇ ಬಹುತೇಕ ಸಿದ್ಧವಾಗಿದೆ. ಸಂಸತ್ತಿನ ಅಧಿವೇಶನದಲ್ಲಿಯೇ ಮಸೂದೆಯನ್ನು ಮಂಡಿಸಲು ಯತ್ನಿಸಲಾಗುವುದು’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.