ದಳ ವೈಫಲ್ಯ: ಬಿಜೆಪಿ ಚಳವಳಿ ಬೆದರಿಕೆ
ಬೆಂಗಳೂರು, ಡಿ. 1– ಜೆ.ಎಚ್.ಪಟೇಲ್ ನೇತೃತ್ವದ ಜನತಾದಳ ಸರ್ಕಾರದ ವೈಫಲ್ಯಗಳ ವಿರುದ್ಧ ರಾಜ್ಯಾದ್ಯಂತ ಚಳವಳಿ ನಡೆಸುವುದಾಗಿ ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಇಂದು ಇಲ್ಲಿ ಎಚ್ಚರಿಕೆ ನೀಡಿದರು.
ಪಕ್ಷದ ಬೇಡಿಕೆಗಳನ್ನು ಪುನರುಚ್ಚರಿಸಿದ ಅವರು, ‘ಹದಿನೈದು ದಿನಗಳ ಒಳಗಾಗಿ ತಮ್ಮ ಬೇಡಿಕೆಗಳನ್ನು ಪರಿಗಣಿಸದೇ ಇದ್ದರೆ ಚಳವಳಿ ನಿಶ್ಚಿತ’ ಎಂದು ನುಡಿದರು.
ರಾಜ್ಯ ಘಟಕದ ಕಾರ್ಯಕಾರಿ ಸಮಿತಿ ಸಭೆಯನ್ನು ಉದ್ಘಾಟಿಸಿದ ಅವರು, ‘ಮೊದಲಿಗೆ ಕಾಂಗ್ರೆಸ್ನಿಂದ ನಂತರ ಜನತಾದಳ ಸರ್ಕಾರದ ಆಡಳಿತದಿಂದ ಜನ ಹತಾಶರಾಗಿದ್ದಾರೆ. ಈಗ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಜನ ಬಿಜೆಪಿ ಕಡೆಗೆ ನೋಡುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎರಡೂ ದಿನಗಳನ್ನು ಎಣಿಸುತ್ತಿವೆ. ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಅಸಮರ್ಥ ಎನಿಸಿಕೊಂಡಿರುವ ಪಟೇಲ್ ಸರ್ಕಾರ ಜನರ ನಗೆಪಾಟಲಿಗೆ ಗುರಿಯಾಗಿದೆ’ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.