ADVERTISEMENT

ಪ್ರಜಾವಾಣಿ 25 ವರ್ಷಗಳ ಹಿಂದೆ| ಸೋಮವಾರ, 29–1–1996

​ಪ್ರಜಾವಾಣಿ ವಾರ್ತೆ
Published 28 ಜನವರಿ 2021, 15:20 IST
Last Updated 28 ಜನವರಿ 2021, 15:20 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ, ಜ. 28 (ಪಿಟಿಐ)– ಹವಾಲ ಹಗರಣದ ಫಲಾನುಭವಿಗಳಲ್ಲಿ ಒಬ್ಬರೆಂಬ ಆರೋಪ ಹೊಂದಿರುವ ರಾಷ್ಟ್ರೀಯ ಜನತಾದಳದ ಅಧ್ಯಕ್ಷ ಎಸ್.ಆರ್‌.ಬೊಮ್ಮಾಯಿ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ಜನತಾದಳದ ಹೊಸ ಅಧ್ಯಕ್ಷರಾಗಿ ಬಿಹಾರದ ಮುಖ್ಯಮಂತ್ರಿ ಲಲ್ಲೂ ಪ್ರಸಾದ್‌ ಯಾದವ್‌ ಅವರು ಅಧಿಕಾರ ಸ್ವೀಕರಿಸುವ ಸಾಧ್ಯತೆ ನಿಚ್ಚಳವಾಗಿದೆ.

ಇದಕ್ಕೂ ಮುನ್ನ ಲಲ್ಲೂ ಪ್ರಸಾದ್‌ ಯಾದವ್‌ ಅವರು ಬೊಮ್ಮಾಯಿಯವರೇ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯಬೇಕೆಂಬ ನಿಲುವು ತಾಳಿದ್ದರೆನ್ನಲಾಗಿದೆ. ಆದರೆ ಹವಾಲ ಹಗರಣದಲ್ಲಿ ಒಳಗೊಂಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ, ಪಕ್ಷದ ಪ್ರತಿಷ್ಠೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಬೊಮ್ಮಾಯಿಯವರು ರಾಜೀನಾಮೆ ನೀಡುವುದು ಸೂಕ್ತ ಎಂಬ ನಿಲುವಿಗೇ ಪಕ್ಷದ ಹೆಚ್ಚಿನ ನಾಯಕರು ಒಲವು ತೋರಿಸಿದರು ಎನ್ನಲಾಗಿದೆ.

ಆದರೆ ಬೊಮ್ಮಾಯಿಯವರ ಪ್ರಾಮಾಣಿಕತೆಯನ್ನು ಪ್ರಶ್ನಿಸಲಾಗದು ಎಂದೂ ಈ ನಾಯಕರು ಸಭೆಯಲ್ಲಿ ಅಭಿಪ್ರಾಯಪಟ್ಟರು.

ADVERTISEMENT

ತಾಲ್ಲೂಕಿಗೊಂದು ವಸತಿ ಶಾಲೆ

ಬೆಳಗಾವಿ, ಜ. 28– ಬರುವ ನಾಲ್ಕು ವರ್ಷಗಳಲ್ಲಿ ಪರಿಶಿಷ್ಟರಿಗಾಗಿ ಪ್ರತೀ ತಾಲ್ಲೂಕಿಗೆ ಒಂದರಂತೆ ವಸತಿ ಶಾಲೆಗಳನ್ನು ತೆರೆಯುವ ಗುರಿ ಹೊಂದಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ರಮೇಶ ಜಿಗಜಿಣಗಿ ಇಂದು ಇಲ್ಲಿ ತಿಳಿಸಿದರು.

ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟರ ಕಲ್ಯಾಣಕ್ಕಾಗಿ ನಿಗದಿ ಮಾಡಿರುವ 303 ಕೋಟಿ ರೂ.ಗಳನ್ನು ಕೋಳಿ ಕುರಿಗಳ ಸಾಲಕ್ಕಾಗಿ ಬಳಸದೇ ಸಾರ್ಥಕವಾಗಿ ವೆಚ್ಚ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.