ಬೆಂಗಳೂರು, ಆಗಸ್ಟ್ 11– ಕೇಂದ್ರ ಸರ್ಕಾರದ ಪರಿಶಿಷ್ಟ ಪಂಗಡಗಳ ಪಟ್ಟಿಗೆ ಅನುಗುಣವಾಗಿ ರಾಜ್ಯ ಸರ್ಕಾರ ತಾನು ರೂಪಿಸಿರುವ ಪಟ್ಟಿಯನ್ನು ಪರಿಷ್ಕರಿಸಿ, ಪ್ರಸಕ್ತ ಆ ಪಟ್ಟಿಯಿಂದ ಮಲೇರು, ಮಾಲೇರು ಹಾಗೂ ಕುರುಬ ಜನಾಂಗಗಳನ್ನು ತೆಗೆದು ಹಾಕಲು ಸಚಿವ ಸಂಪುಟ ತೀರ್ಮಾನ ತೆಗೆದುಕೊಂಡಿದೆ.
ಇಂದು ಇಲ್ಲಿ ಸೇರಿದ್ದ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ ವಾರ್ತಾ ಸಚಿವ ಪ್ರೊ. ಬಿ.ಕೆ. ಚಂದ್ರಶೇಖರ್ ಅವರು, ತನ್ನ ಪಟ್ಟಿಯಲ್ಲಿಲ್ಲದ ಜಾತಿಗಳನ್ನು ಸೇರಿಸಿ ರಾಜ್ಯ ಸರ್ಕಾರ ತಾನೇ ಪಟ್ಟಿ ತಯಾರಿಸಿರುವುದಕ್ಕೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಈ ತೀರ್ಮಾನ ತೆಗೆದುಕೊಳ್ಳಲಾಯಿತು ಎಂದು ವಿವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.