ADVERTISEMENT

25 ವರ್ಷಗಳ ಹಿಂದೆ | ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನ ಖಚಿತ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2025, 23:30 IST
Last Updated 12 ಆಗಸ್ಟ್ 2025, 23:30 IST
25 ವರ್ಷಗಳ ಹಿಂದೆ
25 ವರ್ಷಗಳ ಹಿಂದೆ   

ತುಮಕೂರು, ಆಗಸ್ಟ್‌ 12– ಹಿರಿಯ ಮುತ್ಸದ್ಧಿ ಎಸ್‌. ನಿಜಲಿಂಗಪ್ಪ ಅವರ ಕನಸಾಗಿದ್ದ ಭದ್ರಾ ಮೇಲ್ದಂಡೆ ಯೋಜನೆಯನ್ನು ಸ್ವಲ್ಪ ಮಾರ್ಪಾಡಿನೊಂದಿಗೆ ಅನುಷ್ಠಾನಗೊಳಿಸುವುದು ಖಚಿತವಾಗಿದೆ.

ಭದ್ರಾ ನದಿಯ 27 ಟಿಎಂಸಿ ಹೆಚ್ಚುವರಿ ನೀರನ್ನು ಉಪಯೋಗಿಸಿಕೊಂಡು ಬರಪೀಡಿತ ಪ್ರದೇಶಗಳ 15 ತಾಲ್ಲೂಕುಗಳಿಗೆ ಕುಡಿಯುವ ನೀರು ಪೂರೈಸುವ ಮತ್ತು ಈ ಭಾಗದಲ್ಲಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಯೋಜನೆಯನ್ನು ಸರ್ಕಾರ ಪರಿಶೀಲಿಸುತ್ತಿದ್ದು, ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ಪಡೆಯುವುದು ಖಚಿತ ಎಂದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT