
ಪ್ರಜಾವಾಣಿ ವಾರ್ತೆ
ಮಂಗಳೂರು, ಅ. 21– ದೇಶದ ಕೃಷಿ ಮತ್ತು ಕೈಗಾರಿಕಾ ರಂಗದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತಿರುವ ಕೇಂದ್ರದ ಆರ್ಥಿಕ ನೀತಿ ಮತ್ತು ವಿದೇಶಿ ವಸ್ತುಗಳನ್ನು ಆಮದು ಮಾಡಿಕೊಳ್ಳಲು ಮುಕ್ತ ಪರವಾನಗಿ ನೀಡಿರುವ ಕೇಂದ್ರದ ಧೋರಣೆಯನ್ನು ಪ್ರತಿಭಟಿಸಲು ಮಾಜಿ ಪ್ರಧಾನಿಗಳಾದ ವಿ.ಪಿ. ಸಿಂಗ್ ಮತ್ತು ಎಚ್.ಡಿ. ದೇವೇಗೌಡ ಅವರು, ಇಂದು ನವ ಮಂಗಳೂರು ಬಂದರಿನ ಎದುರು ಪ್ರತಿಭಟನೆ ನಡೆಸಿ ಬಂದರು ಮಂಡಳಿಗೆ ಮನವಿ ಸಲ್ಲಿಸಿದರು.
ಮಾಜಿ ಪ್ರಧಾನಿಗಳ ಜೊತೆ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯ ಅಧ್ಯಕ್ಷ ಸಿದ್ದರಾಮಯ್ಯ, ಜಿಲ್ಲಾ ಅಧ್ಯಕ್ಷ ವಸಂತ ಬಂಗೇರ, ಐವಾನ್ ಡಿ‘ಸೋಜಾ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.