ADVERTISEMENT

25 ವರ್ಷಗಳ ಹಿಂದೆ: ಗುರುವಾರ, ಮೇ 29, 1997

​ಪ್ರಜಾವಾಣಿ ವಾರ್ತೆ
Published 28 ಮೇ 2022, 19:31 IST
Last Updated 28 ಮೇ 2022, 19:31 IST
   

ಕಾಂಗ್ರೆಸ್‌ ಅಧ್ಯಕ್ಷತೆ: ಕೇಸರಿಪವಾರ್‌ ನಾಮಪತ್ರ ಸಲ್ಲಿಕೆ
ನವದೆಹಲಿ, ಮೇ 28(ಪಿಟಿಐ)–
ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದ ಇಂದು ಸೀತಾರಾಂ ಕೇಸರಿ ಮತ್ತು ಶರದ್‌ ಪವಾರ್‌ ಅವರು ನಾಮಪತ್ರ ಸಲ್ಲಿಸಿದರು. ಎ.ಆರ್‌.ಅಂತುಳೆ ತಮ್ಮ ನಾಮಪತ್ರ ವಾಪಸ್‌ ಪಡೆದಿರುವುದರಿಂದ ಚುನಾವಣೆ ಕಣ ತ್ರಿಕೋನ ಸ್ಪರ್ಧೆಯಿಂದ ಕಾವೇರಿದೆ.

ಪಕ್ಷದ ಹಾಲಿ ಅಧ್ಯಕ್ಷ ಕೇಸರಿ ಅವರ ಪರವಾಗಿ ಉತ್ತರ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ಜಿತೇಂದ್ರ ಪ್ರಸಾದ್‌ ಅವರು ಚುನಾವಣಾ ಅಧಿಕಾರಿ ಆಸ್ಕರ್‌ ಫರ್ನಾಂಡಿಸ್‌ ಅವರಲ್ಲಿ ನಾಮಪತ್ರ ಸಲ್ಲಿಸಿದರು.

ಶರದ್‌ ಪವಾರ್‌ ಅವರ ಪರಮಹಾರಾಷ್ಟ್ರ ಮತ್ತು ಮಧ್ಯ ಪ್ರದೇಶದ ವರು ನಾಮಪತ್ರಗಳನ್ನು ಸಲ್ಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.