7 ಹೊಸ ಜಿಲ್ಲೆ ನ.1ರಂದು ಅಸ್ತಿತ್ವಕ್ಕೆ
ಬೆಂಗಳೂರು, ಏ.9– ‘ಬಾಗಲಕೋಟೆ, ಚಾಮರಾಜನಗರ, ದಾವಣಗೆರೆ, ಗದಗ, ಹಾವೇರಿ, ಕೊಪ್ಪಳ ಮತ್ತು ಉಡುಪಿ ಈ ಏಳು ಹೊಸ ಜಿಲ್ಲೆಗಳು ಬರುವ ಕನ್ನಡ ರಾಜ್ಯೋತ್ಸವ ದಿನದಂದು ಅಸ್ತಿತ್ವಕ್ಕೆ ಬರಲಿವೆ’ ಎಂದು ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಯುಗಾದಿ ಹಬ್ಬದ ದಿನವಾದ ಮಂಗಳವಾರ ಅಧಿಕೃತವಾಗಿ ಪ್ರಕಟಿಸಿದರು.‘ಇನ್ನೂ ಎರಡು ಜಿಲ್ಲೆಗಳನ್ನು ರಚಿಸಲು ಸರ್ಕಾರ ಬದ್ಧವಾಗಿದೆ’ ಎಂದು ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
‘ಆದರೆ, ಈ ಎರಡು ಜಿಲ್ಲೆಗಳ ಕೇಂದ್ರ ಸ್ಥಾನ ಯಾವುದಾಗಬೇಕೆಂಬ ಬಗ್ಗೆ ಎದ್ದಿರುವ ವಿವಾದವನ್ನು ಎರಡು ವಾರಗಳಲ್ಲಿ ಪರಿಹರಿಸಲಾಗುವುದು’ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.