ADVERTISEMENT

ಪ್ರಜಾವಾಣಿ 25 ವರ್ಷಗಳ ಹಿಂದೆ: 11–10–1995

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2020, 19:31 IST
Last Updated 10 ಅಕ್ಟೋಬರ್ 2020, 19:31 IST
   

ಕಾವೇರಿ: ಗೌಡರಿಗೆ ವೀರೇಂದ್ರ ಸವಾಲು

ಬೆಂಗಳೂರು, ಅ.10– ನನ್ನ ಆಡಳಿತ ಅವಧಿಯಲ್ಲಿ ನಾನು ತಮಿಳುನಾಡಿಗೆ ಐದು ಟಿಎಂಸಿ ನೀರು ಬಿಟ್ಟಿಲ್ಲ ಎನ್ನುವುದು ಸಾಬೀತಾದಲ್ಲಿ ನಾನು ಸಕ್ರಿಯ ರಾಜಕಾರಣದಿಂದಲೇ ನಿವೃತ್ತನಾಗುತ್ತೇನೆ. ಅದೇ ರೀತಿ ಮುಖ್ಯಮಂತ್ರಿ ದೇವೇಗೌಡರ ಮಾತು ಸುಳ್ಳೆಂದಾದಲ್ಲಿ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕಿಳಿಯಬೇಕು’ ಎಂದು ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲರು ಇಂದು ಮುಖ್ಯಮಂತ್ರಿ ಎಚ್‌.ಡಿ. ದೇವೇಗೌಡರಿಗೆ ಸವಾಲು ಹಾಕಿದ್ದಾರೆ.

ಈ ತಿಂಗಳ 8 ರಂದು ಮಂಡ್ಯದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ದೇವೇಗೌಡರು ತಮ್ಮನ್ನು ಟೀಕಿಸಿರುವುದಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಪಾಟೀಲರು, ನಾನು ತಪ್ಪು ಮಾಡಿದ್ದೇನೆಂದು ಸಾಬೀತಾದರೆ ಸಕ್ರೀಯ ರಾಜಕಾರಣದಿಂದ ನಿವೃತ್ತನಾಗುತ್ತೇನೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.